Mangalore : ಸಿಎಂ ಸಿದ್ದರಾಮಯ್ಯ, ಇತರ ಗಣ್ಯರ ವಿರುದ್ಧ ಅವಹೇಳನಕಾರಿ ನಿಂದನೆ ವಿಡಿಯೋ ವೈರಲ್ – ಉತ್ತರ ಕನ್ನಡ ಮೂಲದ ಆರೋಪಿಯ ಬಂಧನ : ಸಿಎಂ ಗೆ ಬಯ್ಯೋವಷ್ಟು ಆರೋಪಿಗೆ ಸಿಟ್ಟು ಯಾಕೆ ಗೊತ್ತಾ?

Mangalore : ಸಿಎಂ ಸಿದ್ದರಾಮಯ್ಯ, ಇತರ ಗಣ್ಯರ ವಿರುದ್ಧ ಅವಹೇಳನಕಾರಿ ನಿಂದನೆ ವಿಡಿಯೋ ವೈರಲ್ – ಉತ್ತರ ಕನ್ನಡ ಮೂಲದ ಆರೋಪಿಯ ಬಂಧನ : ಸಿಎಂ ಗೆ ಬಯ್ಯೋವಷ್ಟು ಆರೋಪಿಗೆ ಸಿಟ್ಟು ಯಾಕೆ ಗೊತ್ತಾ?

ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ಹಾಗೂ ಇತರ ಕೆಲವು ಗಣ್ಯ ವ್ಯಕ್ತಿಗಳ ವಿರುದ್ಧ ವ್ಯಕ್ತಿಯೊಬ್ಬ ಅವಹೇಳನಕಾರಿ ಮಾತನ್ನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ವಿರೋಧಿಸಿ ಅತ್ತಾವರದ ಸುಹಾನ್ ಆಳ್ವ ಎಂಬವರು ನೀಡಿದ ದೂರಿನಂತೆ ಆರೋಪಿಯನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ‌.

ಬಂಧಿತ ವ್ಯಕ್ತಿಯನ್ನು ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅನಿಲ್ ಕುಮಾರ್ (34) ತಂದೆ ಮಂಜಪ್ಪ, ಅಜ್ಜರಣಿ ಗ್ರಾಮ ಎಂದು ಗುರುತಿಸಲಾಗಿದೆ.

ಆರೋಪಿಯು ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ಸಮಯಗಳಿಂದ ಆರೋಪಿಯು ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ.

ಆದರೆ ಸರ್ವರ್ ಸಮಸ್ಯೆ ಮತ್ತು ಇತರ ಸಮಸ್ಯೆಗಳಿಂದ ಕಳೆದ 3 ತಿಂಗಳಿಂದ ಮಾಡಲು ಸಾಧ್ಯವಾಗಲಿಲ್ಲ. ಇದರಿಂದ ಹತಾಶೆಗೊಂಡ ಆತ ಅವಹೇಳನಕಾರಿ ವಿಡಿಯೋ ಮಾಡಿ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ.

ವಿಡಿಯೋ ವೈರಲ್ ಆಗುತ್ತಲೇ‌ ಸುಹಾನ್ ಎಂಬವರು ದೂರು ನೀಡಿದ್ದು, ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಸಿಆರ್. ಸಂಖ್ಯೆ – 6/24 ರಂತೆ IPC u/s 153A, 505(i)(c), 504 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *