ಪ್ರಯಾಣದ ಮುನ್ನ ಬಸ್ ಗೆ ನಮಸ್ಕರಿಸಿದ ಮಹಿಳೆ – ಭಾವುಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಯಾಣದ ಮುನ್ನ ಬಸ್ ಗೆ ನಮಸ್ಕರಿಸಿದ ಮಹಿಳೆ – ಭಾವುಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ನ್ಯೂಸ್ ಆ್ಯರೋ‌ : ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಪೈಕಿ ಬಹು ನಿರೀಕ್ಷಿತ ‘ಶಕ್ತಿ ಯೋಜನೆ’ಗೆ ರವಿವಾರ ಚಾಲನೆ ನೀಡಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಯೋಜನೆ ಇದಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

‘ಶಕ್ತಿ ಯೋಜನೆ’ ಜಾರಿ ವೇಳೆ ಧಾರವಾಡದ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್ ಗೆ ನಮಸ್ಕರಿಸಿ ಬಸ್ ಹತ್ತಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನವನ್ನೂ ಸೆಳೆದಿದೆ.

ಸಿದ್ದರಾಮಯ್ಯ ಹೇಳಿದ್ದೇನು?

ಈ ಚಿತ್ರ ಕಂಡು ಬಾವುಕರಾದ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ‘ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಶಕ್ತಿ ಯೋಜನೆಯನ್ನು ಜಾರಿಗೆ ತಂದೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಸಾಗಲು ಮತ್ತಷ್ಟು ದೃಢವಾಗಿಸಿದೆ.ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು’ ಎಂದಿದ್ದಾರೆ.

ಇದಕ್ಕೂ ಮೊದಲು ಅವರು ”ಶಕ್ತಿ ಯೋಜನೆ’ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ’ ಎಂದಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *