ನಾನು ಧರಿಸಿದ್ದು ಕೃತಕ ಹುಲಿ ಉಗುರಿನ ಪೆಂಡೆಂಟ್ : ವೈರಲ್‌ ಬೆನ್ನಲ್ಲೇ ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ – ವಿನಯ್ ಗುರೂಜಿ ಹುಲಿ ಚರ್ಮದ ಹಿನ್ನೆಲೆಯೂ ಬಹಿರಂಗ..!!

ನಾನು ಧರಿಸಿದ್ದು ಕೃತಕ ಹುಲಿ ಉಗುರಿನ ಪೆಂಡೆಂಟ್ : ವೈರಲ್‌ ಬೆನ್ನಲ್ಲೇ ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ – ವಿನಯ್ ಗುರೂಜಿ ಹುಲಿ ಚರ್ಮದ ಹಿನ್ನೆಲೆಯೂ ಬಹಿರಂಗ..!!

ನ್ಯೂಸ್‌ ಆ್ಯರೋ : ನಾನು ಧರಿಸಿದ್ದು ಕೃತಕ ಹುಲಿ ಉಗುರಿನ ಪೆಂಡೆಂಟ್. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ವಿಚಾರಣೆ ನಡೆಸಬಹುದು. ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಹುಲಿ ಉಗುರಿನ ಲಾಕೆಟ್ ಧರಿಸಿದ ಸಂಬಂಧ ಬಿಗ್‌ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನ ಬೆನ್ನಲ್ಲೇ ಸ್ಯಾಂಡಲ್‌ವುಡ್‌ ನ ನಟರ ಹಾಗೂ ರಾಜಕಾರಣಿಗಳ ಹೆಸರು ಮುನ್ನೆಲೆಗೆ ಬರುತ್ತಿದೆ. ಇನ್ನೂ ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್, ನಟ ಜಗ್ಗೇಶ್, ಶಾಸಕ ಮುನಿರತ್ನ ಅವರು ಕೂಡಾ ಹುಲಿ ಉಗುರಿನ ಲಾಕೆಟ್‌ ಅನ್ನು ಧರಿಸಿರುವ ಫೋಟೋ ಹಾಗೂ ವಿಡಿಯೋಗಳನ್ನು ವೈರಲ್ ಮಾಡಿ ಇವರ ಮೇಲೆ ಯಾಕಿಲ್ಲ ಕ್ರಮ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಇನ್ನೂ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಹಾಗೇ ಈ ಬಗ್ಗೆ ಸ್ಪಷ್ಟಣೆ ನೀಡಿದ್ದಾರೆ.

‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಅದಲ್ಲದೆ ಈ ಪ್ರಕರಣ ಸಂಬಂಧ ವಿನಯ್ ಗುರೂಜಿ ಅವರು ಮತ್ತೇ ಸುದ್ದಿಯಲ್ಲಿದ್ದಾರೆ. 4 ಹುಲಿ ಚರ್ಮದ ಮೇಲೆ ವಿನಯ್ ಗುರೂಜಿ ಕುಳಿತಿರುವ ಫೋಟೋವನ್ನು ವೈರಲ್ ಮಾಡಲಾಗಿದೆ.

ಹುಲಿ ಚರ್ಮವನ್ನು ಈಗಾಗಲೇ ಹಿಂತಿರುಗಿಸಲಾಗಿದೆ

2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಉಡುಗೊರೆ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಹುಲಿ ಚರ್ಮ ಮನೆಯಲ್ಲಿತ್ತು. ಆ ಹುಲಿ ಚರ್ಮವನ್ನು ವಿನಯ್ ಗುರೂಜಿಗೆ ನೀಡಿದ್ದರು. ಈ ಹಿಂದೆಯೂ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೋ ವೈರಲ್ ಆಗಿತ್ತು. ಹೀಗಾಗಿ 2022 ರಲ್ಲಿ ಅದನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎನ್ನುವ ಮೂಲಕ ಹುಲಿ ಚರ್ಮದ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *