HSRP ಅಳವಡಿಸಲು ಮತ್ತಷ್ಟು ಗಡುವು ನೀಡಲು ತೀರ್ಮಾನಿಸಿದ ಸಾರಿಗೆ ಇಲಾಖೆ – ಅಧಿಕೃತ ಆದೇಶವಷ್ಟೇ ಬಾಕಿ, ನಂಬರ್ ಪ್ಲೇಟ್ ಅಳವಡಿಕೆ ಹೇಗೆ?

HSRP ಅಳವಡಿಸಲು ಮತ್ತಷ್ಟು ಗಡುವು ನೀಡಲು ತೀರ್ಮಾನಿಸಿದ ಸಾರಿಗೆ ಇಲಾಖೆ – ಅಧಿಕೃತ ಆದೇಶವಷ್ಟೇ ಬಾಕಿ, ನಂಬರ್ ಪ್ಲೇಟ್ ಅಳವಡಿಕೆ ಹೇಗೆ?

ನ್ಯೂಸ್ ಆ್ಯರೋ‌ : 2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್​ಗಳನ್ನು (ಎಚ್​ಎಸ್​ಆರ್​ಪಿ) ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಪುನಃ 2 ಅಥವಾ 3 ತಿಂಗಳು ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ತೀರ್ಮಾನಿಸಿದ್ದು, ನವೆಂಬರ್ ಮೊದಲ ವಾರದಲ್ಲಿ ಆದೇಶ ಹೊರಬೀಳಲಿದೆ.

ಎಚ್​ಎಸ್​ಆರ್​ಪಿ ಹಾಕಿಸಲು ಸಾರಿಗೆ ಇಲಾಖೆ ನ.17ರ ಗಡುವು ವಿಧಿಸಿತ್ತು. ಆದರೆ, ಹೊಸದಾಗಿ ನಾಮಫಲಕ ಅಳವಡಿಸಲು ವಾಹನ ಮಾಲೀಕರು ನಿರಾಸಕ್ತಿ ತೋರುತ್ತಿದ್ದಾರೆ. ಈವರೆಗೂ ರಾಜ್ಯದಲ್ಲಿ ಬರೀ 2.30 ಲಕ್ಷ ವಾಹನಗಳಿಗೆ ಮಾತ್ರ ಎಚ್​ಎಸ್​ಆರ್​ಪಿ ಅಳವಡಿಸಲಾಗಿದೆ. 1950ರಿಂದಲೂ ಆಗಿರುವ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ.

ಸದ್ಯ ನಿಗದಿಪಡಿಸಿರುವ ನ.17ರ ಒಳಗೆ ಒಂದೂವರೆ ಕೋಟಿ ವಾಹನಗಳಿಗೆ ನಾಮಫಲಕ ಅಳವಡಿಕೆ ಸಾಧ್ಯವಿಲ್ಲ. ಹೀಗಾಗಿ 2 ಅಥವಾ 3 ತಿಂಗಳು ಅವಧಿ ವಿಸ್ತರಿಸುವ ಬಗ್ಗೆ ಅಧಿಕಾರಿಗಳ ಹಂತದಲ್ಲಿ ಮಾತುಕತೆ ನಡೆದಿದೆ. ಎಚ್​ಎಸ್​ಆರ್​ಪಿ ಅಳವಡಿಸಲು ರಾಜ್ಯಾದ್ಯಂತ 4000ಕ್ಕೂ ಅಧಿಕ ಡೀಲರ್ ಪಾಯಿಂಟ್​ಗಳನ್ನು ಸಾರಿಗೆ ಇಲಾಖೆ ಗುರುತಿಸಿದೆ.

ಪ್ಲೇಟ್ ಹಾಕಿಸುವುದೇಗೆ? Transport.karnataka.gov.in ಅಥವಾ www.siam.inಗೆ ಕೊಟ್ಟು ಬುಕ್ ಎಚ್ಎಸ್ಆರ್ಪಿ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಬೇಕು. ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿಕೊಂಡರೆ ಅವರೇ ಬಂದು ಫಿಟ್ ಮಾಡುತ್ತಾರೆ.

ಎಚ್ಎಸ್ಆರ್ಪಿ ಅಳವಡಿಕೆಗೆ ನಿಗದಿಪಡಿಸಿರುವ ಅವಧಿ ವಿಸ್ತರಣೆಗೆ ಸಚಿವರು ಈಗಾಗಲೆ ಒಪ್ಪಿಗೆ ನೀಡಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಸಭೆ ನಡೆಸಿ, ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ. ರಾಜ್ಯದಲ್ಲಿ ಈವರೆಗೆ ಬರೀ 2.30 ಲಕ್ಷ ವಾಹನಗಳಿಗೆ ಹೊಸ ಪ್ಲೇಟ್ ಅಳವಡಿಸಲಾಗಿದೆ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *