ಡ್ರೋನ್‌ ಮೂಲಕ ರಕ್ತ ರವಾನೆ ಪ್ರಯೋಗ ಯಶಸ್ವಿ – ಐಸಿಎಂಆರ್‌ ಇಂಥಾ ಪ್ರಯೋಗ ಮಾಡಿದ್ದೇಕೆ?

ಡ್ರೋನ್‌ ಮೂಲಕ ರಕ್ತ ರವಾನೆ ಪ್ರಯೋಗ ಯಶಸ್ವಿ – ಐಸಿಎಂಆರ್‌ ಇಂಥಾ ಪ್ರಯೋಗ ಮಾಡಿದ್ದೇಕೆ?

ನ್ಯೂಸ್ ಆ್ಯರೋ‌ : ಆಧುನಿಕ ತಂತ್ರಜ್ಞಾನವನ್ನು ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದೆ. ಇನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಇಂತಹ ತಂತ್ರಜ್ಞಾನಗಳ ನೆರವಿನಿಂದ ಅನೇಕ ಪ್ರಯೋಗಗಳನ್ನು ಕೈಗೊಂಡು ಯಶಸ್ವಿಯಾಗಿದೆ. ಕೋವಿಡ್‌ ಕಾಲದಲ್ಲಿ ಐ-ಡ್ರೋನ್‌ ಮೂಲಕ ದೂರದ ಪ್ರದೇಶಗಳಿಗೆ ಕೋವಿಡ್ ಲಸಿಕೆ ರವಾನಿಸಲಾಗಿತ್ತು. ಇದೀಗ ಡ್ರೋನ್‌ ಮೂಲಕ ರಕ್ತ ರವಾನೆ(ಬ್ಲಡ್‌ ಡೆಲಿವರಿ) ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದು, ಇದರ ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸುಗಳಿಸಿದೆ.

ಗುರುವಾರ i-DRONE ಮೂಲಕ ರಕ್ತ ರವಾನೆಯ ಪರೀಕ್ಷೆ ನಡೆಸಲಾಗಿತ್ತು. 10 ಯುನಿಟ್ ರಕ್ತದ ಮಾದರಿಯನ್ನು ಹೊತ್ತ ಐ-ಡ್ರೋನ್‌ ನೋಯ್ಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಯ ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿಗೆ ಯಶಸ್ವಿಯಾಗಿ ತಲುಪಿದೆ. ಈ ಪ್ರಯೋಗ ಯಶಸ್ವಿಯಾಗಿರುವುದಕ್ಕೆ ಐಸಿಎಂಆರ್‌ ಸಂತಸ ವ್ಯಕ್ತಪಡಿಸಿದೆ.

ಐಸಿಎಂಆರ್‌ನ ಮಹಾನಿರ್ದೇಶಕ ಡಾ.ರಾಜೀವ್ ಬಹ್ಲ್ ಟ್ವೀಟ್ ಮಾಡಿ, ‘ಇಂದು ಡ್ರೋನ್‌ ಮೂಲಕ ರಕ್ತ ರವಾನೆ ಮಾಡುವ ಪ್ರಾಯೋಗಿಕ ಪ್ರಯತ್ನದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಡಿಮೆ ತಾಪಮಾನದಲ್ಲಿ ರಕ್ತ ರವಾನೆ ಮಾಡಬೇಕಿದ್ದು, ಈ ಸವಾಲನ್ನೂ ಗೆದ್ದಿದ್ದೇವೆ. ತಾಪಮಾನವನ್ನು ನಿರ್ವಹಿಸಿದ್ದಲ್ಲದೆ, ರಕ್ತದ ಮಾದರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಂಡಿದ್ದೇವೆ’ ಎಂದಿದ್ದಾರೆ.

‘ಡ್ರೋನ್‌ ಜೊತೆಗೆ ಮತ್ತೊಂದು ರಕ್ತದ ಮಾದರಿಯನ್ನು ಆ್ಯಂಬುಲೆನ್ಸ್ ಮೂಲಕ ಕಳುಹಿಸಲಾಗಿತ್ತು. ಎರಡು ವಿಧಾನಗಳನ್ನು ಬಳಸಿ ಕಳುಹಿಸಲಾದ ರಕ್ತದ ಮಾದರಿಯಲ್ಲಿ ಯಾವುದೇ ವ್ಯತ್ಯಾಸ ಕಾಣಿಸದಿದ್ದರೆ ಡ್ರೋನ್‌ ಮೂಲಕ ರಕ್ತ ರವಾನೆ ಮಾಡುವ ವಿಧಾನವನ್ನು ದೇಶಾದ್ಯಂತ ಪರಿಚಯಿಸಲಾಗುವುದು’ ಎಂದು ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *