ಇನ್ಮುಂದೆ ರೈಲ್ವೆ ಟಿಕೆಟ್ ಗಾಗಿ ಕೌಂಟರ್ ಮುಂದೆ ನಿಲ್ಲೋದು ಬೇಕಿಲ್ಲ – ಮೊಬೈಲ್ ಆ್ಯಪ್ ಮೂಲಕ ಸುಲಭವಾಗಿ ಟಿಕೆಟ್ ಖರೀದಿಸೋದು ಹೇಗೆ?

ಇನ್ಮುಂದೆ ರೈಲ್ವೆ ಟಿಕೆಟ್ ಗಾಗಿ ಕೌಂಟರ್ ಮುಂದೆ ನಿಲ್ಲೋದು ಬೇಕಿಲ್ಲ – ಮೊಬೈಲ್ ಆ್ಯಪ್ ಮೂಲಕ ಸುಲಭವಾಗಿ ಟಿಕೆಟ್ ಖರೀದಿಸೋದು ಹೇಗೆ?

ನ್ಯೂಸ್ ಆ್ಯರೋ‌ : ಟಿಕೆಟ್ ಗಾಗಿ ಸಾಲಿನಲ್ಲಿ ನಿಲ್ಲುವ ಶೈಲಿಗೆ ಪೂರ್ಣ ವಿರಾಮ ಇಡುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಕಾರ್ಯ ಪ್ರವೃತ್ತವಾಗಿದೆ. ಅದರ ಭಾಗವಾಗಿ ಯುಟಿಎಸ್ ಮೊಬೈಲ್ ಆ್ಯಪ್ ಪರಿಚಯಿಸಿದ್ದು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಕ್ಷಣವೇ ಟಿಕೆಟ್ ಪಡೆಯಬಹುದಾಗಿದೆ.

ಶೇ. 30ರಷ್ಟು ಇಳಿಕೆ

ಈ ಆ್ಯಪ್ ಬಳಕೆಯಿಂದ ಟಿಕೆಟ್ ಕೌಂಟರ್ ಮುಂಭಾಗದ ಶೇ. 30ರಷ್ಟು ಸರದಿ ಸಾಲನ್ನು ಕಡಿಮೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಯುಟಿಎಸ್ ಆ್ಯಪ್ ಮೂಲಕ ಕಾಯ್ದಿರಿಸದ ಸಾಮಾನ್ಯ ಪ್ರಯಾಣದ ಟಿಕೆಟ್, ಫ್ಲಾಟ್ ಫಾರ್ಮ್ ಟಿಕೆಟ್, ಸೀಸನ್ ಟಿಕೆಟ್ ಗಳನ್ನು ಸುಲಭವಾಗಿ ಬುಕ್ ಮಾಡಬಹುದು. ನಿಲ್ದಾಣಗಳಲ್ಲಿರುವ ಕ್ಯೂಆರ್ ಕೋಡ್ ಅನ್ನು ಆ್ಯಪ್ ಮೂಲಕ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಬಹುದು.

ಕೋಡ್ ಸ್ಕ್ಯಾನ್ ಮಾಡಿದ ನಂತರ ಗ್ರಾಹಕರಿಗೆ ಯಾತ್ರಾ ಟಿಕೆಟ್ ಅಥವಾ ಫ್ಲಾಟ್ ಫಾರ್ಮ್ ಟಿಕೆಟ್ ಬೇಕೆ ಎನ್ನುವ ಆಯ್ಕೆ ಬರುತ್ತದೆ. ಅದನ್ನು ಆರಿಸಬೇಕು. ಬಳಿಕ ಮೊದಲಿನಂತೆ ಟಿಕೆಟ್ ಖರೀದಿಸಬಹುದು. ತಪಾಸಣೆ ಸಮಯದಲ್ಲಿ ಮೊಬೈಲ್ ನಲ್ಲಿರುವ ಟಿಕೆಟ್ ತೋರಿಸಿದರೆ ಸಾಕಾಗುತ್ತದೆ.

ಮತ್ತೊಂದು ವಿಶೇಷ ಎಂದರೆ ಇದಕ್ಕೆ ಇಂಟರ್ ನೆಟ್ ಅಗತ್ಯವಿಲ್ಲ. ಆದರೆ ಯುಟಿಎಸ್ ಆ್ಯಪ್ ಮೂಲಕ ಮೀಸಲು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿಲ್ಲ. ಡೆಬಿಟ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮುಂತಾದ ವಿಧಾನಗಳಿಂದ ಹಣ ಪಾವತಿಸಬಹುದು.

ಈ ಆ್ಯಪ್ ಅನ್ನು ಹೈದರಾಬಾದ್ ಮೂಲದ ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಷನ್ ಸಿಸ್ಟಮ್ಸ್ (ಸಿ.ಆರ್.ಐ.ಎಸ್.) ಅಭಿವೃದ್ದಿ ಪಡಿಸಿ ನಿರ್ವಹಿಸುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *