ನಿಮ್ಮ ಮೊಬೈಲ್ ಹ್ಯಾಂಗ್ ಆಗ್ತಾ ಇದೆಯಾ? – ಸರಿಪಡಿಸೋಕೆ ಈ ಸಿಂಪಲ್ ಟ್ರಿಕ್ಸ್ ಬಳಸಿ…

ನಿಮ್ಮ ಮೊಬೈಲ್ ಹ್ಯಾಂಗ್ ಆಗ್ತಾ ಇದೆಯಾ? – ಸರಿಪಡಿಸೋಕೆ ಈ ಸಿಂಪಲ್ ಟ್ರಿಕ್ಸ್ ಬಳಸಿ…

ನ್ಯೂಸ್ ಆ್ಯರೋ : ನಮ್ಮ ದೈನಂದಿನ ಆಗುಹೋಗುಗಳಿಗೆ ಸದಾ ನಮ್ಮೊಡನಿರಬೇಕಾದ ಮೊಬೈಲ್ ಫೋನ್ ಏನಾದರೂ ಕೆಲಸ ಸ್ಥಗಿತಗೊಳಿಸಿತೋ, ಹಲವರಿಗೆ ಇನ್ನಿಲ್ಲದ ಚಡಪಡಿಕೆ, ಕೆಲವರಿಗೆ ವ್ಯವಹಾರಕ್ಕೂ ಹೊಡೆತ ಬೀಳುವ ಸ್ಥಿತಿ, ಏನು ಮಾಡುವುದೆಂಬ ಚಿಂತೆ. ಸ್ಮಾರ್ಟ್ ಆಗಿರುವ ಮೊಬೈಲ್ ಫೋನ್‌ಗಳಿಗೆ ನಾವಿಂದು ಅಷ್ಟೊಂದು ಒಗ್ಗಿಕೊಂಡಿದ್ದೇವೆ.

ಇಂಥ ಪರಿಸ್ಥಿತಿಯಲ್ಲಿ, ಯಾವುದೋ ಒಂದು ಆ್ಯಪ್ ತೆರೆದಾಗಲೋ ಅಥವಾ ಸ್ಕ್ರೀನ್ ಅನ್‌ಲಾಕ್ ಮಾಡಿದಾಗಲೋ, ಫೋನ್ ಜಪ್ಪಯ್ಯ ಎಂದರೂ ಯಾವುದೇ ರೀತಿಯಲ್ಲಿ ಸ್ಪಂದಿಸುವುದಿಲ್ಲ ಎಂದಾದರೆ? ಈ ರೀತಿಯ ಸಮಸ್ಯೆ ಹಲವರಿಗೆ ಎದುರಾಗಿರಬಹುದು. ಇದನ್ನು ಫೋನ್ ‘ಹ್ಯಾಂಗ್ ಆಗುವುದು’, ‘ಫ್ರೀಜ್ ಆಗುವುದು’ ಅಂತೆಲ್ಲ ಹೇಳಲಾಗುತ್ತದೆ.

ಇದಕ್ಕೆ ಪರಿಹಾರವೇನು? ಹೆಚ್ಚಿನ ಸಂದರ್ಭದಲ್ಲಿ ಇದಕ್ಕಾಗಿ ನೂರಾರು ರೂಪಾಯಿ ಖರ್ಚು ಮಾಡಿ ಮೊಬೈಲ್ ದುರಸ್ತಿ ಮಾಡುವವರ ಬಳಿಗೆ ಒಯ್ಯಬೇಕಿಲ್ಲ. ನಾವೇ ಮಾಡಿ ನೋಡಬಹುದಾದ ಎರಡು ಅತ್ಯಂತ ಸರಳ ವಿಧಾನಗಳು ಇಲ್ಲಿವೆ…

ಫೋನನ್ನು ನಾವು ಸದಾ ಕಾಲ ಬಳಸುತ್ತಿರುತ್ತೇವೆ. ಫೋನ್ ಕೂಡ ಮಿನಿ ಕಂಪ್ಯೂಟರೇ ಆಗಿರುವುದರಿಂದ, ನಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಕಂಪ್ಯೂಟರುಗಳ ಬಗ್ಗೆ ನಾವು ಎಷ್ಟು ಕಾಳಜಿ ತೋರಿಸುತ್ತೇವೋ, ನಮ್ಮ ದೈನಂದಿನ ಸಂಗಾತಿಯಾಗಿರುವ ಮೊಬೈಲ್ ಬಗ್ಗೆಯೂ ಕಾಳಜಿ ವಹಿಸಬೇಕು. ಈ ರೀತಿ ಹ್ಯಾಂಗ್ ಅಥವಾ ಫ್ರೀಜ್ ಆಗುವ ಮೊದಲೇ ನಾವು ಕೆಲವೊಂದು ಮುನ್ನೆಚ್ಚರಿಕೆ ವಹಿಸಿದರೆ ಅದರ ಬ್ಯಾಟರಿಗೂ, ಕಾರ್ಯಾಚರಣಾ ವ್ಯವಸ್ಥೆಗೂ ಅನುಕೂಲವಾಗುತ್ತದೆ.

ಮೊದಲ ವಿಧಾನವೆಂದರೆ, ನಮ್ಮ ಆಂಡ್ರಾಯ್ಡ್, ಐಒಎಸ್ ಅಥವಾ ವಿಂಡೋಸ್ ಮುಂತಾದ ಕಾರ್ಯಾಚರಣಾ ವ್ಯವಸ್ಥೆಗಳಿರುವ ಮೊಬೈಲ್ ಫೋನನ್ನು ಸುಮ್ಮನೇ ರೀಸ್ಟಾರ್ಟ್ ಮಾಡುವುದು. ಇದನ್ನು ರೀಬೂಟಿಂಗ್ ಅಂತಾನೂ ಕರೆಯುತ್ತಾರೆ. ಅಂದರೆ, ಫೋನ್ ಸ್ವಿಚ್ ಆಫ್ ಮಾಡಿ ಮರಳಿ ಆನ್ ಮಾಡುವುದು.

ಫೋನ್‌ನ ಪವರ್ ಬಟನ್ ಅನ್ನು ಕೆಲವು ಕ್ಷಣ ಒತ್ತಿ ಹಿಡಿದುಕೊಂಡರೆ, ರೀಸ್ಟಾರ್ಟ್, ಪವರ್ ಆಫ್ ಹಾಗೂ ಹೊಸ ಫೋನ್‌ಗಳಲ್ಲಿ ‘ಸ್ಕ್ರೀನ್ ಶಾಟ್’ ಬಟನ್‌ಗಳು ಗೋಚರಿಸುತ್ತವೆ. ಇದರಲ್ಲಿ ‘ರೀಸ್ಟಾರ್ಟ್’ ಒತ್ತಿದರೆ, ತಾನಾಗಿ ಆಫ್ ಆಗಿ, ಮರಳಿ ಆನ್ ಆಗುತ್ತದೆ. ಇಲ್ಲವೇ, ‘ಪವರ್ ಆಫ್’ ಒತ್ತಿ, ಐದು ನಿಮಿಷದ ನಂತರ ನಾವೇ ಆನ್ ಮಾಡಬೇಕಾಗುತ್ತದೆ.

ಇದನ್ನು ‘ಸಾಫ್ಟ್ ರೀಸೆಟ್’ ಎಂದು ತಂತ್ರಜ್ಞಾನ ಭಾಷೆಯಲ್ಲಿ ಕರೆಯಲಾಗುತ್ತದೆ. ಹೀಗೆ ಮಾಡಿದಾಗ, ನಮಗರಿವಿಲ್ಲದಂತೆಯೇ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಕೆಲವು ಆ್ಯಪ್‌ಗಳು ಮುಚ್ಚಲ್ಪಟ್ಟು, ಫೋನ್‌ಗೂ ತಾಜಾತನ ದೊರೆಯುತ್ತದೆ. ಹ್ಯಾಂಗ್ ಅಥವಾ ಕಾರ್ಯಸ್ಥಗಿತಗೊಳಿಸಿದ ಫೋನ್‌ಗೆ ಪುನಶ್ಚೇತನ ದೊರೆಯುತ್ತದೆ. ಹೀಗೆ ಮಾಡಿದಾಗ ಫೋನ್‌ನಲ್ಲಿರುವ ಯಾವುದೇ ಫೈಲ್‌ಗಳಾಗಲೀ, ಆ್ಯಪ್‌ಗಳಾಗಲೀ ಅಳಿಸಿಹೋಗುವುದಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *