ಭಾರತದಲ್ಲೇ ತಯಾರಾಗಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಸರಣಿಯ ಸ್ಮಾರ್ಟ್ಫೋನ್’ಗಳು – ಇನ್ಮುಂದೆ ಸ್ಯಾಮ್ಸಂಗ್ ಕೂಡ ‘ಮೇಡ್ ಇನ್ ಇಂಡಿಯಾ’

ಭಾರತದಲ್ಲೇ ತಯಾರಾಗಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಸರಣಿಯ ಸ್ಮಾರ್ಟ್ಫೋನ್’ಗಳು – ಇನ್ಮುಂದೆ ಸ್ಯಾಮ್ಸಂಗ್ ಕೂಡ ‘ಮೇಡ್ ಇನ್ ಇಂಡಿಯಾ’

ನ್ಯೂಸ್ ಆ್ಯರೋ ; ಹಲವು ವರ್ಷಗಳಿಂದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ದೇಶದ ಪ್ರಮುಖ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಎಂದರೆ ಅದು ಸ್ಯಾಮ್ಸಂಗ್. ಸ್ಯಾಮ್ಸಂಗ್ ವಿಶ್ವದಾದ್ಯಂತ ಬಳಕೆದಾರರನ್ನು ಹೊಂದಿದ್ದು, ಇತ್ತೀಚೆಗಂತೂ ಇಂದಿನ ಕಾಲಮಾನಕ್ಕೆ ಬೇಕಾದ ರೀತಿಯ ಫೀಚರ್ ಗಳೊಂದಿಗೆ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಇದೀಗ ಹೊಸದಾಗಿ ಸ್ಮಾರ್ಟ್ಫೋನ್ ವಲಯದಲ್ಲಿ ಸಂಚಲನ ಸೃಷ್ಟಿಸಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಸರಣಿಯ ಸ್ಮಾರ್ಟ್ಫೋನ್ ಗಳು ಭಾರತದಲ್ಲೇ ತಯಾರಾಗಲಿದೆ ಎಂದು ಕಂಪೆನಿಯು ತಿಳಿಸಿದೆ.

ಹೌದು, 2018ರಲ್ಲಿ ಪ್ರಧಾನಿ‌ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ ನೋಯ್ಡಾದಲ್ಲಿರುವ ದೇಶದ‌ ಅತೀ ದೊಡ್ಡ ಮೊಬೈಲ್ ತಯಾರಿಕಾ ಘಟಕದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಸರಣಿಯ ಸ್ಮಾರ್ಟ್ಫೋನ್ ಗಳು ತಯಾರಾಗಲಿವೆ. ಭಾರತದ ಉತ್ಪಾದನೆ ಹಾಗೂ ಬೆಳವಣಿಗೆ ಹೆಚ್ಚಿಸುವ ಉದ್ದೇಶದಿಂದ, ‘ಮೇಡ್‌ ಇನ್‌ ಇಂಡಿಯಾ‘ ಗ್ಯಾಲಕ್ಸಿ S23 ಮೊಬೈಲ್‌ ಫೋನ್‌ಗಳನ್ನು ಭಾರತದಲ್ಲಿಯೇ ತಯಾರಿಸಲಾಗುವುದು ಎಂದು ಸಾಮ್ಸಂಗ್‌ ಕಂಪೆನಿಯ ಸ್ಪಷ್ಟನೆ ನೀಡಿದೆ.

ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಫೀಚರ್ಸ್ ಹೀಗಿರಲಿದೆ..

ಮೇಡ್‌ ಇನ್ ಇಂಡಿಯಾ ಕಲ್ಪನೆಯಲ್ಲಿ ಭಾರತದಲದಲೇ ತಯಾರಾಗಲಿರುವ ಈ ಸ್ಮಾರ್ಟ್ಫೋನ್ ನಲ್ಲಿ ಸ್ನಾಫ್‌ಡ್ರ್ಯಾಗನ್ 8 Gen ಪ್ರೊಸೆಸರ್ ಇರಲಿದ್ದು, ಅತ್ಯದ್ಭುತ ಅನುಭವ ನೀಡುವ ಗೇಮಿಂಗ್‌ ಫೀಚರ್‌ ಇರಲಿದೆ. ಇದಕ್ಕಾಗಿ ವಿಶ್ವದ ವೇಗದ ಮೊಬೈಲ್ ಗ್ರಾಫಿಕ್ಸ್‌ಗಳನ್ನು ಬಳಕೆ ಮಾಡಲಾಗಿದೆ ಎನ್ನಲಾಗಿದೆ. ಜೊತೆಗೆ ಈ ಮೊಬೈಲ್‌ನಲ್ಲಿ ಮರುಬಳಕೆ ಮಾಡಲಾದ ವಸ್ತುಗಳನ್ನು ಹೆಚ್ಚಾಗಿ ಬಳಸಲಾಗಿದ್ದು, 200MP ಅತ್ಯಾಧುನಿಕ ಕ್ಯಾಮೆರಾ ವ್ಯವಸ್ಥೆ ಹೊಂದಿರಲಿದೆ‌ ಎಂದು ಕಂಪೆನಿ‌ ತಿಳಿಸಿದೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *