ತಿರುಪತಿಯಲ್ಲಿ ಅಳವಡಿಕೆಯಾಗಲಿದೆ ಫೇಸ್ ರೆಕಗ್ನಿಷನ್ ವ್ಯವಸ್ಥೆ – ವಿಶ್ವದ ಶ್ರೀಮಂತ ದೇಗುಲದಲ್ಲಿ ಮಾ.1ರಿಂದ ನೂತನ ವ್ಯವಸ್ಥೆ ಜಾರಿ

ತಿರುಪತಿಯಲ್ಲಿ ಅಳವಡಿಕೆಯಾಗಲಿದೆ ಫೇಸ್ ರೆಕಗ್ನಿಷನ್ ವ್ಯವಸ್ಥೆ – ವಿಶ್ವದ ಶ್ರೀಮಂತ ದೇಗುಲದಲ್ಲಿ ಮಾ.1ರಿಂದ ನೂತನ ವ್ಯವಸ್ಥೆ ಜಾರಿ

ನ್ಯೂಸ್ ಆ್ಯರೋ : ವಿಶ್ವದ ಅತ್ಯಂತ ಶ್ರೀಮಂತ ದೇಗುಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅದೇ ರೀತಿ ಈ ದೇವಸ್ಥಾನದ ಬೊಕ್ಕಸಕ್ಕೂ ದೇಶ ಮಾತ್ರವಲ್ಲದೇ ವಿದೇಶಗಳಿಂದಲೂ ಬರುವ ಭಕ್ತರಿಂದ ಕೋಟ್ಯಾಂತರ ಆದಾಯ ಹರಿದು ಬರುತ್ತದೆ. ಇದೀಗ, ಈ ದೇಗುಲದಲ್ಲಿ ಅಲ್ಲಿನ ಆಡಳಿತ ಮಂಡಳಿ ನೂತನ ವ್ಯವಸ್ಥೆಯೊಂದನ್ನು ಜಾರಿಗೊಳಿಸಲು ತೀರ್ಮಾನಿಸಿದೆ.

ತಿರುಪತಿಯಲ್ಲಿ ಮಾ. 1ರಿಂದ ಫೇಶಿಯಲ್ ರೇಕಗ್ನಿಷನ್ ವ್ಯವಸ್ಥೆ ಜಾರಿಗೊಳಿಸಲು ಟಿಟಿಡಿ ಕ್ರಮ‌ಕೈಗೊಂಡಿದ್ದು, ದೇಗುಲದ ಟೋಕನ್ ವಿತರಣೆ, ಲಡ್ಡು ವಿತರಣಾ ಸ್ಥಳಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರತಿದಿನ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುತ್ತಾರೆ. ದೇವಾಲಯದಲ್ಲಿ ಟೋಕನ್ ಇಲ್ಲದೆ ದರ್ಶನ ಪಡೆಯುವ ಸ್ಥಳ, ಹೆಚ್ಚಿನ ಟೋಕನ್ ವಿತರಿಸುವ ಸ್ಥಳ, ಲಡ್ಡು ವಿತರಣೆ ಸ್ಥಳ, ಕೊಠಡಿ ಹಂಚಿಕೆ, ಹಣ ಮರುಪಾವತಿ ಮೊದಲಾದ ಕಡೆಗಳಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಕೆಲ ಭಕ್ತರು ಪದೇ ಪದೇ ಟೋಕನ್, ಲಡ್ಡು ಪಡೆಯುವ ಮೂಲಕ ಇತರೆ ಭಕ್ತಾದಿಗಳಿಗೆ ತೊಂದರೆ ಕೊಡುತ್ತಾರೆ ಎಂಬ ದೂರುಗಳ ಬರುತ್ತಿರುವ ಕಾರಣ ಈ ಪೇಶಿಯಲ್ ರೆಕಗ್ನಿಷನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *