Whatsapp Edit Button : ವಾಟ್ಸ್​ಆ್ಯಪ್ ನಲ್ಲಿ ತಪ್ಪು ಸಂದೇಶ ಕಳುಹಿಸಿದ್ದೀರಾ? – ಇನ್ನು ಚಿಂತೆ ಬಿಟ್ಟು ಎಡಿಟ್ ಮಾಡಿ..!!

Whatsapp Edit Button : ವಾಟ್ಸ್​ಆ್ಯಪ್ ನಲ್ಲಿ ತಪ್ಪು ಸಂದೇಶ ಕಳುಹಿಸಿದ್ದೀರಾ? – ಇನ್ನು ಚಿಂತೆ ಬಿಟ್ಟು ಎಡಿಟ್ ಮಾಡಿ..!!

ನ್ಯೂಸ್ ಆ್ಯರೋ‌ : ಇನ್ನು ಮುಂದೆ ವಾಟ್ಸ್​ಆ್ಯಪ್ ನಲ್ಲಿ ಮೆಸೇಜ್ ಕಳುಹಿಸಿದ ಬಳಿಕ ಅದರಲ್ಲಿ ತಪ್ಪು ಕಂಡುಬಂದರೆ ಚಿಂತಿಸಬೇಕಾಗಿಲ್ಲ. ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಬಹು ನಿರೀಕ್ಷಿತ ಆಯ್ಕೆಯನ್ನು ಈ ಮೆಸೇಜಿಂಗ್ ಆ್ಯಪ್ ಶೀಘ್ರ ಪರಿಚಯಿಸಲಿದೆ.

‘ಎಡಿಟ್ ಸೆಂಟ್ ಮೆಸೇಜ್’ ಎಂಬ ನೂತನ ಆಪ್ ಡೇಟ್ ಸದ್ಯ ಬೀಟಾ ವರ್ಶನ್‌ನಲ್ಲಿ ಲಭ್ಯವಿದೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲ ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ ಇದಕ್ಕೆ ಕಾಲಮಿತಿ ಇದ್ದು, 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ.

ಗಮನಿಸಬೇಕಾದ ಸಂಗತಿ ಎಂದರೆ, ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಡಿಲೀಟ್ ಮಾಡಿದರೆ ಹೇಗೆ ಚಾಟ್​ನಲ್ಲಿ ಮಾಹಿತಿ ಮೂಡುತ್ತದೆಯೊ ಅದೇ ರೀತಿ ಎಡಿಟ್ ಮಾಡಿದರೆ ಕೂಡ ಕಳುಹಿಸಿದವರಿಗೆ ತಿಳಿಯುತ್ತದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿತ್ತು ಎನ್ನಲಾಗಿದೆ. ಶೀಘ್ರದಲ್ಲೇ ಎಲ್ಲಾ ಬಳಕೆದಾರರಿಗೆ ನೂತನ ಫೀಚರ್ ಲಭ್ಯವಾಗಲಿದೆ.

ಮೆನು ಆಪ್ಶನ್ ಕ್ಲಿಕ್ ಮಾಡಿ ಎಡಿಟ್ ಮೆಸೇಜ್ ಕ್ಲಿಕ್ ಮಾಡಿದಾಗ ನೂತನ ಫೀಚರ್ ಲಭ್ಯವಾಗಲಿದೆ ಎನ್ನಲಾಗಿದೆ. ಒಂದೇ ಮೆಸೇಜನ್ನು ಎಷ್ಟು ಬಾರಿ ಬೇಕಾದರೂ ಎಡಿಟ್ ಮಾಡಬಹುದು. ಆದರೆ ಭದ್ರತಾ ದೃಷ್ಟಿಯಿಂದ ಸಂಪೂರ್ಣ ಸಂದೇಶವನ್ನು ಬದಲಾಯಿಸಲು ಸಾಧ್ಯವಿಲ್ಲ. ಬಳಕೆದಾರರು ಸಂದೇಶಗಳನ್ನು ಎಡಿಟ್ ಮಾಡುವ ಫೀಚರ್ಸ್ ಬೇಕು ಎಂದು ಹಲವು ಬಾರಿ ಬೇಡಿಕೆ ಇಟ್ಟಿದ್ದರು. ಇದೀಗ ಈ ಕೋರಿಕೆ ಈಡೇರುವ ಹಂತದಲ್ಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *