ಬಿಗ್‌ ಬಾಸ್ ಮನೆಯಲ್ಲಿ ಅವಘಡ: ಆಸ್ಪತ್ರೆ ಸೇರಿದ ಇಬ್ಬರು ಸ್ಪರ್ಧಿಗಳು

bigg-boss kannada season 11
Spread the love

ನ್ಯೂಸ್ ಆ್ಯರೋ:‌ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭವಾಗಿ ಇನ್ನೂ ವಾರ ಕಳೆದಿಲ್ಲ ಆಗಲೇ ದುರ್ಘಟನೆಯೊಂದು ನಡೆದು ಹೋಗಿದೆ. ಟಾಸ್ಕ್​ ವೇಳೆ ಅವಘಡ ಸಂಭವಿಸಿದ್ದು ಪರಿಣಾಮ ತ್ರಿವಿಕ್ರಂ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್​ಗೂ ಪೆಟ್ಟಾಗಿದೆ ಎನ್ನಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ.

ಟಾಸ್ಕ್ ಆಡುವಾಗ ಚೆಂಡು ಹಿಡಿದು ಓಡುತ್ತಿದ್ದ ತ್ರಿವಿಕ್ರಂ ಅವರು ಬಿದ್ದಿದ್ದಾರೆ. ಇದರಿಂದ ಅವರಿಗೆ ಪೆಟ್ಟಾಗಿದೆ. ಅವರನ್ನು ಕನ್ಫೆಷನ್​ ರೂಂಗೆ ಕರೆತರುವಂತೆ ಬಿಗ್ ಬಾಸ್ ಸೂಚನೆ ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಆಗಿದೆ. ಅವರು ಚಿಕಿತ್ಸೆ ಪಡೆದು ದೊಡ್ಮನೆ ಒಳಗೆ ಬಂದಿದ್ದಾರಂತೆ. ಅದೇ ರೀತಿ ಗೋಲ್ಡ್​ ಸುರೇಶ್​ಗೂ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ.

Leave a Comment

Leave a Reply

Your email address will not be published. Required fields are marked *