12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರ ಭಾರತ ಪ್ರವಾಸ – 600 ಮಂದಿ ಸೆರೆಯಾಳುಗಳನ್ನು ಬಿಡುಗಡೆ ಮಾಡಲಿದ್ಯಾ ಪಾಕ್?

12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರ ಭಾರತ ಪ್ರವಾಸ – 600 ಮಂದಿ ಸೆರೆಯಾಳುಗಳನ್ನು ಬಿಡುಗಡೆ ಮಾಡಲಿದ್ಯಾ ಪಾಕ್?

ನ್ಯೂಸ್ ಆ್ಯರೋ‌ : ಗೋವಾದಲ್ಲಿ ಶಾಂಘೈ ಸಹಕಾರ ಒಕ್ಕೂಟದ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಶೃಂಗಸಭೆ ಆಯೋಜಿಸಿದ್ದು, ಪಾಕಿಸ್ತಾನದ ಸಚಿವ ಬಿಲಾವಲ್ ಭುಟ್ಟೋ ಪಾಲ್ಗೊಂಡಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡಿದಂತಾಗಿದೆ. 2011ರಲ್ಲಿ ಪಾಕ್ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಭಾರತಕ್ಕೆ ಭೇಟಿ ನೀಡಿದ್ದರು.

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನ ಬಿಲಾವಲ್ ಭಾರತ ಭೇಟಿ ಬೆನ್ನಲ್ಲೇ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ತನ್ನ ವಶದಲ್ಲಿರುವ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಹೌದು, ಭಾರತದ ಜೊತೆ ಸ್ನೇಹ ಸಂಬಂಧ ಹೊಂದಲು ಕಾತರಿಸುತ್ತಿರುವ ಪಾಕಿಸ್ತಾನ ಗಡಿ ಉಲ್ಲಂಘಿಸಿದ ಕಾರಣಕ್ಕೆ ತನ್ನ ಜೈಲುಗಳಲ್ಲಿರುವ ಒಟ್ಟು 600 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ.

ಮೇ 12ರಂದು 200 ಹಾಗೂ ಮೇ 14ರಂದು 400 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ. ಈ ಮೂಲಕ ಭಾರತ ತನ್ನ ಮೇಲೆ ಹೊಂದಿರುವ ಅಸಮಾಧಾನವನ್ನು ಒಂದಷ್ಟು ಕಡಿಮೆಗೊಳಿಸಬಹುದು ಎಂದು ಪಾಕಿಸ್ತಾನ ಚಿಂತನೆ ನಡೆಸಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ಮೊದಲಿನಿಂದಲೂ ಭಾರತೀಯ ಮೀನುಗಾರರ ಬಿಡುಗಡೆಗೆ ಒತ್ತಡ ಹೇರುತ್ತಿದೆ.

ಪಾಕಿಸ್ತಾನದ ಜೈಲುಗಳಲ್ಲಿರುವ ಒಟ್ಟು 705 ಮಂದಿ ಭಾರತೀಯರ ಪೈಕಿ 654 ಮಂದಿ ಮೀನುಗಾರರು ಎಂದು ವರದಿ ಹೇಳಿದೆ. ಇತ್ತ ಭಾರತದ ಜೈಲಿನಲ್ಲಿ 434 ಮಂದಿ ಪಾಕಿಸ್ತಾನಿಗಳಿದ್ದು, ಈ ಪೈಕಿ 95 ಮಂದಿ ಮೀನುಗಾರರು.

ಹಸ್ತಾಂತರ ಹೇಗೆ?

ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ 200 ಮಂದಿಯನ್ನು ಈದಿ ಫೌಂಡೇಶನ್ ರಸ್ತೆ ಮಾರ್ಗದ ಮೂಲಕ ಲಾಹೋರ್ ಗೆ ಕರೆ ತರಲಿದ್ದು, ಬಳಿಕ ವಾಘಾ ಗಡಿಯಲ್ಲಿ ಭಾರತೀಯ ಯೋಧರಿಗೆ ಒಪ್ಪಿಸಲಾಗುತ್ತದೆ ಎನ್ನಲಾಗಿದೆ..

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *