ತನಿಷಾ ಜೊತೆ ವರ್ತೂರು ಸಂತೋಷ್ ಸಪ್ತಪದಿ; ಮದುವೆ ಬಗ್ಗೆ ಹಳ್ಳಿಕಾರ್ ಹೇಳಿದ್ದೇನು?

ನ್ಯೂಸ್ ಆ್ಯರೋ: ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಮದುವೆ ಆಗಬೇಕು ಎಂದು ಅನೇಕ ಜನರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ.
ಇವರಿಬ್ಬರು ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಗಳಾಗಿ ದೊಡ್ಮನೆ ಒಳಗೆ ಹೋಗಿದ್ರು. ಬಿಗ್ ಬಾಸ್ ಮನೆಯಲ್ಲಿ ಇಬ್ಬರ ನಡುವೆ ಉತ್ತಮ ಸ್ನೇಹ ಬೆಳೆದಿತ್ತು. ಬಳಿಕ ಇಬ್ಬರ ಮನಸ್ಸಲ್ಲಿ ಪ್ರೀತಿ ಅರಳಿದೆ ಎನ್ನುವ ಗಾಸಿಪ್ ಹಬ್ಬಿತ್ತು. ಇತರ ಸ್ಪರ್ಧಿಗಳು ಕೂಡ ಈ ಜೋಡಿ ಕಾಲೆಳೆಯುತ್ತಿದ್ರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಮೇಲೂ ತನಿಷಾ ಹಾಗೂ ವರ್ತೂರು ಸಂತೋಷ್ ಸ್ನೇಹ ಮುಂದುವರಿಸಿದ್ರು. ಅನೇಕ ಬಾರಿ ಭೇಟಿ ಕೂಡ ಆಗಿದ್ದಾರೆ. ಇದನ್ನೆಲ್ಲಾ ನೋಡಿದ ಫ್ಯಾನ್ಸ್ ಈ ಜೋಡಿ ಮದುವೆ ಆಗೋದು ಪಕ್ಕಾ ಎನ್ನುತ್ತಿದ್ದಾರೆ.
ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಎಲ್ಲಿಗೆ ಹೋದ್ರೂ ಇಬ್ಬರ ಮದುವೆ ಬಗ್ಗೆ ಜನರು ಕೇಳುತ್ತಲೇ ಇರ್ತಾರೆ. ಯಾವಾಗ ಮದುವೆ ಎಂಬ ಅಭಿಮಾನಿಗಳ ಪ್ರಶ್ನೆಗೆ ವರ್ತೂರು ಸಂತೋಷ್ ಇದೀಗ ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತಾಡಿದ ವರ್ತೂರು ಸಂತೋಷ್, ಜನರ ಅಭಿಪ್ರಾಯಕ್ಕೆ ನಾವು ಗೌರವ ಕೊಡಬೇಕು. ಆದರೆ ನನ್ನ ಮತ್ತು ತನಿಷಾ ಮದುವೆ ಸಾಧ್ಯವಿಲ್ಲ.
ನಮ್ಮದು ಅವಿಭಕ್ತ ಕುಟುಂಬವಾದ್ದರಿಂದ ಅಲ್ಲಿ ಸಂಪ್ರದಾಯಗಳು ಜಾಸ್ತಿ. ಸ್ನೇಹಕ್ಕೆ ಬೆಲೆ ಕಟ್ಟೋಕೆ ಯಾರಿಂದಲೂ ಸಾಧ್ಯವಿಲ್ಲ. ವೈಯಕ್ತಿಕ ಜೀವನ ಸಾರ್ವಜನಿಕ ಜೀವನದ ನಡುವೆ ದೊಡ್ಡ ವ್ಯತ್ಯಾಸ ಇದೆ. ಹಿರಿಯರ ತೀರ್ಮಾನಕ್ಕೆ ನಾನು ಕಟ್ಟುಬಿದ್ದಿರುವೆ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
Leave a Comment