ಕೇರಳ ಸ್ಟೋರಿ ಚಿತ್ರ ಟೀಕಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ ಯುವತಿಗೆ ಸಂಕಷ್ಟ – ನನಗೇನಾದರೂ ಆದರೆ ಪತಿಯೇ ಕಾರಣ ಎಂದು ಗೋಳಿಟ್ಟ ಅತುಲ್ಯ..!

ಕೇರಳ ಸ್ಟೋರಿ ಚಿತ್ರ ಟೀಕಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ ಯುವತಿಗೆ ಸಂಕಷ್ಟ – ನನಗೇನಾದರೂ ಆದರೆ ಪತಿಯೇ ಕಾರಣ ಎಂದು ಗೋಳಿಟ್ಟ ಅತುಲ್ಯ..!

ನ್ಯೂಸ್ ಆ್ಯರೋ : ದಿ ಕೇರಳ ಸ್ಟೋರಿ ಚಿತ್ರವನ್ನು ಟೀಕಿಸಿದ್ದ ಯುವತಿ ಬಳಿಕ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದು, ಸದ್ಯ ಸಂಕಷ್ಟದಲ್ಲಿದ್ದೇನೆ ಎಂದು ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟಿವ್ ಆಗಿದ್ದ ಕೇರಳದ ಯುವತಿ ಅತುಲ್ಯ ಅಶೋಕನ್‌ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುವ ಸಲುವಾಗಿ ಇಸ್ಲಾಂಗೆ ಮತಾಂತರಗೊಂಡು ಆಲಿಯಾ ಆಗಿದ್ದರು.

ಇದೀಗ ಇವರು ಮದುವೆಯ ಬಳಿಕ ಸಂಕಷ್ಟ ಅನುಭವಿಸುತ್ತಿರುವುದಾಗಿ ಇನ್ ಸ್ಟಾ ಗ್ರಾಮ್ ನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ಬಳಿಕ ಈ ಪೋಸ್ಟ್ ಅನ್ನು ಅಳಿಸಲಾಗಿದೆ.

ಈ ವಿಡಿಯೋದಲ್ಲಿ ಆಕೆ ನನಗೇನಾದರೂ ಆದರೆ ನನ್ನ ಕುಟುಂಬದ ಯಾರೂ ಜವಾಬ್ದಾರರಲ್ಲ. ಕೇವಲ ಈತ ಮಾತ್ರ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಆಕೆ ತನ್ನ ಪತಿ ರೈಸಲ್‌ ಮನ್ಸೂರ್‌ ಜೊತೆಗಿನ ಎಲ್ಲಾ ಚಿತ್ರಗಳನ್ನು ಹಾಕಿದ್ದು, ಇದರಲ್ಲಿ ಆಕೆಯ ಮದುವೆಯ ಚಿತ್ರಗಳೂ ಸೇರಿವೆ.

ಮೇ ತಿಂಗಳಲ್ಲಿ ದೇಶಾದ್ಯಂತ ಸದ್ದು ಮಾಡಿದ್ದ ದಿ ಕೇರಳ ಸ್ಟೋರಿ ಚಿತ್ರ ಬಿಡುಗಡೆಗೂ ಮುನ್ನವೇ ಅತುಲ್ಯ ಅಶೋಕನ್‌ ರೈಸಲ್‌ ಮನ್ಸೂರ್‌ನನ್ನು ವಿವಾಹವಾಗಿದ್ದರು.

ಕೇರಳ ಸ್ಟೋರಿ ಚಿತ್ರವು ಇತರ ಧರ್ಮಗಳ 32,000 ಮಹಿಳೆಯರನ್ನು ಇಸ್ಲಾಮ್‌ಗೆ ಸಾಮೂಹಿಕವಾಗಿ ಮತಾಂತರಗೊಳಿಸುವುದು ಮತ್ತು ಅಂತಿಮವಾಗಿ ಭಯೋತ್ಪಾದಕ ಸಂಘಟನೆಗೆ ಅವರನ್ನು ಸೇರಿಸುವ ಕಥಾ ಹಂದರವನ್ನು ಒಳಗೊಂಡಿತ್ತು.

ಈ ಚಿತ್ರದ ಬಗ್ಗೆ ಕಾಮೆಂಟ್ ಮಾಡಿದ್ದ ಅತುಲ್ಯ ಅಶೋಕನ್‌, ಇದೊಂದು ಕೆಲವು ಸಿದ್ಧಾಂತಗಳ ಬಿತ್ತಲು ಮಾಡಿರುವ ಚಿತ್ರ ಎಂದು ಟೀಕಿಸಿದ್ದರು. ಅಲ್ಲದೇ ಇದನ್ನು ಸಾಬೀತು ಮಾಡುವಂತೆ ನಿರ್ದೇಶಕರಿಗೆ ಸವಾಲು ಹಾಕಿದ್ದರು. ಇದನ್ನು ಆಕೆಯ ಕೆಲವು ಸ್ನೇಹಿತರು ಕೂಡ ಬೆಂಬಲಿಸಿದ್ದರು.

ಆದರೆ ಈಗ ಅತುಲ್ಯ ಅಶೋಕನ್‌ ತಾವು ಕಷ್ಟದಲ್ಲಿ ಇರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ದಿ ಕೇರಳ ಸ್ಟೋರಿ ಎನ್ನುವುದು ನಿಜ ಎಂದು ಹೇಳಿರುವುದು ಮಾತ್ರವಲ್ಲ ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *