32 ವರ್ಷದ ನಂತರ ಈ ಊರಲ್ಲಿ ನಡೆಯಲಿದೆ ವಿಶೇಷ ಜಾತ್ರೆ – ಆದ್ರೆ ಊರಿಗೆ ಊರೇ ಚಪ್ಪಲಿ ಧರಿಸೋದಿಲ್ಲ, ಯಾಕೆ ಗೊತ್ತಾ…!?

32 ವರ್ಷದ ನಂತರ ಈ ಊರಲ್ಲಿ ನಡೆಯಲಿದೆ ವಿಶೇಷ ಜಾತ್ರೆ – ಆದ್ರೆ ಊರಿಗೆ ಊರೇ ಚಪ್ಪಲಿ ಧರಿಸೋದಿಲ್ಲ, ಯಾಕೆ ಗೊತ್ತಾ…!?

ನ್ಯೂಸ್ ಆ್ಯರೋ : 32 ವರ್ಷಗಳ ನಂತರ ಕೋಟೆನಾಡು ಚಿತ್ರದುರ್ಗದಲ್ಲಿ ವಿಶೇಷ ಜಾತ್ರೆ ಸಂಭ್ರಮ ಮನೆಮಾಡಿದ್ದು, ಈ ಜಾತ್ರೆ ಸಂದರ್ಭದಲ್ಲಿ ಇಡೀ ಊರಿಗೆ ಪಾದರಕ್ಷೆ ನಿಷೇಧಿಸಲಾಗಿದೆ.

ಚಿತ್ರದುರ್ಗದ ಬೊಮ್ಮೇನಹಳ್ಳಿಯಲ್ಲಿ ಗ್ರಾಮದೇವತೆ ಉತ್ಸವ ನಡೆಯುತ್ತಿದೆ. ಇಡೀ ಗ್ರಾಮದ ಸೀಮೆಗೆ ಗಂಗಾಜಲ ಚುಮುಕಿಸಿ ಸರಗಾ ಹಾಕಲಾಗುತ್ತದೆ.

ಸಾಮಾನ್ಯವಾಗಿ ದೇವಾಲಯಗಳಿಗೆ ಹೋಗುವಾಗ ಚಪ್ಪಲಿ ಇಲ್ಲದೆ ಹೋಗಲಾಗುತ್ತದೆ. ಆದರೆ ಈ ಗ್ರಾಮಕ್ಕೆ ಎಂಟ್ರಿ ಕೊಡುವಾಗಲೇ ಚಪ್ಪಲಿ ಇಲ್ಲದೆ ಬರಬೇಕಾಗುತ್ತದೆ. ಅಲ್ಲಿಂದ ಎಲ್ಲಿಗೆ ತೆರಳಬೇಕಾದರೂ ಚಪ್ಪಲಿಯನ್ನು ಕೈಯಲ್ಲಿಯೇ ಹಿಡಿದು ತೆರಳಬೇಕಾಗುತ್ತದೆ.

ಮೂರು ದಶಕಗಳ ನಂತರ ಜಾತ್ರೆ ನಡೆಯುತ್ತಿದ್ದು, ಊರಿಗೇ ಊರೇ ಸಂಭ್ರಮಿಸುತ್ತಿದೆ. ಗ್ರಾಮದ ಮಾರಿಕಾಂಬಾ, ಬಸಾಯ ಪಟ್ಟಣಂ ದೇವಿಯರ ಉತ್ಸವ ನಡೆಯಲಿದೆ. ಮೊದಲ ದಿನ ಗಂಗಾಪೂಜೆ, ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯಲಿದೆ.

ಇಡೀ ಗ್ರಾಮವನ್ನೇ ಶುದ್ಧಗೊಳಿಸಿ, ಗಂಗಾಜಲ ಹಾಕುವುದರಿಂದ ಇದು ಪರಿಶುದ್ಧ ಎಂದು ಭಾವಿಸಲಾಗುತ್ತದೆ. ಹಾಗಾಗಿ ಇಲ್ಲಿ ಚಪ್ಪಲಿ ಹಾಕುವುದಿಲ್ಲ. ಬೈಕ್, ಕಾರ್ ಓಡಿಸುವವರೂ ಕೂಡ ಚಪ್ಪಲಿ ಇಲ್ಲದೆ ಓಡಾಡಬೇಕಿದೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *