ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ವರನಿಗೆ ಸಂಕಷ್ಟ – ಮದುಮಗ ಅತುಲ್ ವಿರುದ್ಧ ಕೇಸ್ ಜಡಿದ ಪೋಲಿಸರು : ಕಾರಣವೇನು ಗೊತ್ತಾ…!?

ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ವರನಿಗೆ ಸಂಕಷ್ಟ – ಮದುಮಗ ಅತುಲ್ ವಿರುದ್ಧ ಕೇಸ್ ಜಡಿದ ಪೋಲಿಸರು : ಕಾರಣವೇನು ಗೊತ್ತಾ…!?

ನ್ಯೂಸ್ ಆ್ಯರೋ : ಮುಂಬೈನಲ್ಲಿ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಇತ್ತೀಚೆಗಷ್ಟೇ ಅತುಲ್ ಹೆಸರಿನ ಒಂದೇ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಭಾರಿ ಸುದ್ದಿಯಲ್ಲಿದ್ದರೆ, ಅತ್ತ ಮುಂಬೈ ಪೋಲಿಸರು‌ ಅತುಲ್ ವಿರುದ್ಧ ಕೇಸ್ ಜಡಿದಿದ್ದಾರೆ‌.


ಅವಳಿ ಸಹೋದರಿಯರು ಮಂದಹಾಸ ಬೀರುತ್ತಾ ವರ ಅತುಲ್ಗೆ ಹಾರ ಹಾಕುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅತುಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೊದಲ ಸಂಗಾತಿಯು ಬದುಕಿರುವಾಗ ಅಥವಾ ಮೊದಲು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸದೆ ಮರುಮದುವೆಯಾಗುವುದು ಕಾನೂನುಬಾಹಿರ ಎಂಬ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.



ಕೆಲವು ವರದಿಗಳ ಪ್ರಕಾರ ಅತುಲ್ ಈಗಾಗಲೇ ಹಲವು ಮದುವೆಗಳಾಗಿದ್ದಾನೆಂದು ಆರೋಪಿಸಲಾಗಿದೆ. ಪ್ರಸ್ತುತ ನಡೆದ ಮದುವೆ ವಿಚಾರ ತಿಳಿದ ಕೂಡಲೇ ಮೊದಲ ಪತ್ನಿ ಅತುಲ್ ವಿರುದ್ಧ ದೂರು ದಾಖಲಿಸಿರುವುದಾಗಿಯೂ ವರದಿಯಾಗಿದೆ.



ಅಲ್ಲದೆ, ಮಹಾರಾಷ್ಟ್ರದ ಮಹಿಳಾ ಆಯೋಗವು ಅತುಲ್ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. ಆದರೆ, ಅವಳಿ ಸಹೋದರಿಯೇ ಸ್ವಇಚ್ಛೆಯಿಂದ ಅತುಲ್ನನ್ನು ಮದುವೆ ಆಗಿದ್ದರೆ, ಕಾನೂನಿನಲ್ಲಿ ಖಂಡಿತವಾಗಿಯೂ ಅತುಲ್ಗೆ ವಿನಾಯಿತಿ ನೀಡಬೇಕೆಂದು ಕೆಲವರು ಆಗ್ರಹಿಸಿದ್ದಾರೆ.



ವಿಡಿಯೋ ವೈರಲ್ ಆದ ಬೆನ್ನಲ್ಲೇ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಇನ್ನು ಕೆಲವರು ಇದಪ್ಪಾ ಅದೃಷ್ಟ ಅಂತಾ ಬಗೆಬಗೆಯ ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.



ಅಂದಹಾಗೆ ಅವಳಿ ಸಹೋದರಿಯ ಹೆಸರು ಪಿಂಕಿ ಎಂ.ಪಡಗಾಂವ್ಕರ್ ಮತ್ತು ರಿಂಕಿ ಎಂ.ಪಡಗಾಂವ್ಕರ್. ಇವರು ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಕಾರಣ, ಒಬ್ಬರನ್ನೊಬ್ಬರು ಬಿಟ್ಟು ದೂರ ಇರಲಾಗದೇ ಇಬ್ಬರು ಸಹೋದರಿಯರು ಅತುಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು ಎಂದು ವರದಿಯಾಗಿದೆ.



ಅತುಲ್ ಕೂಡ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಕೆಲ ದಿನಗಳ ಹಿಂದೆ ತಂದೆ ನಿಧನರಾದ ಹಿನ್ನೆಲೆಯಲ್ಲಿ ಸಹೋದರಿಯರು ತಾಯಿಯೊಂದಿಗೆ ವಾಸವಾಗಿದ್ದರು. ಯಾವಾಗ ತಾಯಿಗೂ ಅನಾರೋಗ್ಯ ಕಾಡಲು ಆರಂಭಿಸಿತೋ ಆಗ ಅತುಲ್ ಕಾರಿನಲ್ಲಿ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *