‘ಬಾಹುಬಲಿ’ಯಂತೆ ಬೈಕ್ ಹೊತ್ತು ಸಾಗಿದ ಬೈಕ್ ಸವಾರ – ಮಳೆ ತಂದ ಅವಾಂತರ, ಬೈಕ್ ಸವಾರನ ಸಾಹಸದ ವಿಡಿಯೋ ವೈರಲ್.‌..!!

‘ಬಾಹುಬಲಿ’ಯಂತೆ ಬೈಕ್ ಹೊತ್ತು ಸಾಗಿದ ಬೈಕ್ ಸವಾರ – ಮಳೆ ತಂದ ಅವಾಂತರ, ಬೈಕ್ ಸವಾರನ ಸಾಹಸದ ವಿಡಿಯೋ ವೈರಲ್.‌..!!

ನ್ಯೂಸ್ ಆ್ಯರೋ : ರಾಯಚೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಕರೇಕಲ್ ಅಂಡರ್ ಪಾಸ್ ಮುಳುಗಡೆಯಾಗಿದ್ದು, ವ್ಯಕ್ತಿಯೊಬ್ಬ ನೀರಿನಲ್ಲಿ ಹೆಚ್.ಎಫ್ ಡಿಲಕ್ಸ್ ಬೈಕ್ ಹೊತ್ತು ಸಾಗಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು.. ಬಾಹುಬಲಿಯಂತೆ ವ್ಯಕ್ತಿಯೋರ್ವ ಬೈಕ್ ಹೊತ್ತುಕೊಂಡು ರೈಲ್ವೆ ಕೆಳ ಸೇತುವೆಯನ್ನು ದಾಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಾಯಚೂರು ತಾಲೂಕಿನ ಕರೆಕಲ್ ಗ್ರಾಮಕ್ಕೆ ಹೋಗುವ ರಸ್ತೆ ನಡುವೆ ಬರುವ ರೈಲ್ವೇ ಅಂಡರ್ಪಾಸ್ ರಸ್ತೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಬೈಕ್‌ ಸವಾರ ಹೆಗಲ ಮೇಲೆ ಬೈಕ್‌ ಅನ್ನು ಹೊತ್ತುಕೊಂಡು ಹೋಗಿದ್ದಾನೆ.

ಆ ದೃಶ್ಯ ಬಾಹುಬಲಿ ಸಿನಿಮಾದಲ್ಲಿ ನಟ ಪ್ರಭಾಸ್​ ಶಿವಲಿಂಗವನ್ನು ಹಿಡಿದು ನೀರಿನಲ್ಲಿ ನಡೆಯುವ ದೃಶ್ಯವನ್ನು ನೆನಪಿಸುವಂತಿದ್ದು, ಈ ವೇಳೆ ಅಲ್ಲಿದ್ದ ಜನರು ಶಹಬ್ಬಾಸ್‌ ಹುಲಿಯಾ.. ಇದೇ ರೀತಿ ಎಲ್ಲ ಬೈಕ್‌ ಅನ್ನು ಆ ಕಡೆ ಇಟ್ಟು ಬಿಡಿ. ನೂರು- ನೂರು ರೂಪಾಯಿ ಕೊಡುತ್ತೇವೆ ಎಂದು ಹೇಳಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಮೊಣಕಾಲು ಮಟ್ಟದ ನೀರಿನಲ್ಲಿ ಬೈಕ್ ಸಾಗದ ಹಿನ್ನೆಲೆಯಲ್ಲಿ ಭುಜದ ಮೇಲೆ ಬೈಕ್ ಹೊತ್ತು ದಡ ಸೇರಿದ್ದು, ಬೈಕ್ ಸೈಲೆನ್ಸರ್ ಮುಳುಗಡೆ ಭೀತಿಯಿಂದ ವ್ಯಕ್ತಿ ಬೈಕ್ ಹೊತ್ತು ಹರಸಾಹಸ ತೋರಿಸಿದ್ದಾನೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಇನ್ನು ಕಳೆದ ಕೆಲ ದಿನಗಳಿಂದ ರಾಯಚೂರಲ್ಲಿ ಸುರಿದ ಭಾರೀ ಮಳೆಯಿಂದ ರೈಲ್ವೇ ಕೆಳ ಸೇತುವೆಯಲ್ಲಿ ನೀರು ನಿಂತು ಕೆರೆಯಂತೆ ಆಗಿದ್ದು, ಕರೆಕಲ್ ಗ್ರಾಮ ಸೇರಿ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇರುವ ರೈಲ್ವೇ ಅಂಡರ್‌ಪಾಸ್‌ನಲ್ಲಿ ಪ್ರತಿ ವರ್ಷವೂ ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಳೆಯಾದಾಗಲೆಲ್ಲ ಭಾರೀ ಪ್ರಮಾಣದಲ್ಲಿ ನೀರು ನಿಲ್ಲುವುದರಿಂದ ವಾಹನಗಳ ಸಂಚಾರ ದುಸ್ತರವಾಗಲಿದ್ದು, ಸಮಸ್ಯೆ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಅಂಡರ್‌ಪಾಸ್‌ನಲ್ಲಿ ನೀರು ನಿಲ್ಲುವ ಸಮಸ್ಯೆ ಬಗೆಹರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *