ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ – ಆಮಂತ್ರಣ ಪತ್ರಿಕೆ ವೈರಲ್ : ವಿಹಿಂಪ, ಭಜರಂಗದಳದಿಂದ ವಿರೋಧ

ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ – ಆಮಂತ್ರಣ ಪತ್ರಿಕೆ ವೈರಲ್ : ವಿಹಿಂಪ, ಭಜರಂಗದಳದಿಂದ ವಿರೋಧ

ನ್ಯೂಸ್ ಆ್ಯರೋ‌ : ಉತ್ತರಾಖಂಡದ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದು, ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.

ಬೇನಾಮ್‌ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಬಿಜೆಪಿ ಬೆಂಬಲಿಗರು ಹಾಗೂ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ಬೇನಾಮ್‌ ಅವರ ಇಬ್ಬಗೆ ನೀತಿಯ ಕುರಿತು ಟ್ರೋಲ್‌ ಮಾಡಿದ್ದಾರೆ. ಬೇರೆಯವರು ಮುಸ್ಲಿಂ ಯುವಕನನ್ನು ವಿವಾಹವಾದರೆ ಲವ್‌ ಜಿಹಾದ್‌ ಎಂದು ಆರೋಪಿಸುತ್ತಿರುವ ಬಗ್ಗೆ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಲಾಗಿದೆ.

ಅತ್ತ ಮತಾಂತರದ ಕಥಾ ಹಂದರವಿರುವ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದ್ದು, ಇತ್ತ ಬಿಜೆಪಿ ಮುಖಂಡರೊಬ್ಬರ ಮಗಳು ಮುಸ್ಲಿಂ ಯುವಕನ ಜೊತೆ ವಿವಾಹವಾಗುತ್ತಿದ್ದಾರೆ. ಬಿಜೆಪಿಯ ಈ ಇಬ್ಬಗೆಯ ನೀತಿ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲಿದೆ ಎಂದು ಫೇಸ್‌ ಬುಕ್‌ ಬಳಕೆದಾರರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಬಿಜೆಪಿಯ ಮುಖಂಡರು ತಮ್ಮ ಮಗಳನ್ನು ಮುಸ್ಲಿಂ ಯುವಕನಿಗೆ ಧಾರೆ ಎರೆಯುತ್ತಿದ್ದಾರೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ ವಿರೋಧಿಸಬೇಕಾಗಿದೆ ಎಂದು ಪೌರಿ ದೇವಾಲಯ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಮೇ 28ರಂದು ಬೇನಾಮ್ ಪುತ್ರಿಯ ವಿವಾಹ ನಡೆಯಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *