ಮೃತಪಟ್ಟಿದ್ದಾನೆ ಎಂದುಕೊಂಡಿದ್ದ ವ್ಯಕ್ತಿ ಸ್ಮಶಾನದಲ್ಲಿ ಎದ್ದು ಕುಳಿತ – ಘಟನೆ ನಡೆದದ್ದೆಲ್ಲಿ? ಏನಾಗಿತ್ತು ಗೊತ್ತಾ?
- ವೈರಲ್ ನ್ಯೂಸ್
- June 5, 2023
- No Comment
- 251
ನ್ಯೂಸ್ ಆ್ಯರೋ : ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕ ಸತ್ತಿದ್ದಾನೆ ಎಂದುಕೊಂಡು ಮನೆಯವರು ಅಂತ್ಯ ಸಂಸ್ಕಾರ ನಡೆಸಲು ಮುಂದಾಗಿದ್ದರು. ಈ ವೇಳೆ ಆತನಿಗೆ ಎಚ್ಚರವಾಗಿ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮೊರೆನಾ ನಗರದ ವಾರ್ಡ್ 47ರ ಶಾಂತಿಧಾಮದ ಯುವಕ ಜೀತು ಪ್ರಜಾಪತಿ ಬಹಳ ದಿನಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಮೇ 30ರಂದು ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತು. ದೇಹದಲ್ಲಿ ಯಾವುದೇ ಚಲನವಲನ ಇಲ್ಲದ ಕಾರಣ ಸಂಬಂಧಿಕರು ಈತ ಮೃತಪಟ್ಟಿದ್ದಾನೆಂದು ಭಾವಿಸಿದ್ದರು.
ಹೀಗಾಗಿ ಸಂಬಂಧಿಕರು ಜೀತು ಅವರ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ ಸ್ಮಶಾನಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಚಿತೆಯನ್ನು ಸಿದ್ಧಪಡಿಸಲಾಗಿತ್ತು. ಇನ್ನೇನು ಸ್ವಲ್ಪ ಹೊತ್ತಿನಲ್ಲಿ ಬೆಂಕಿ ಇಡಬೇಕು ಎನ್ನುವಷ್ಟರಲ್ಲಿ ಆತನ ದೇಹದಲ್ಲಿ ಚಲನವಲನ ಕಂಡು ಬಂತು.
ತಕ್ಷಣ ವೈದ್ಯರನ್ನು ಕರೆಸಲಾಯಿತು. ವೈದ್ಯರು ಪರೀಕ್ಷೆ ಮಾಡಿ ಇಸಿಜಿ ಮತ್ತು ಚಿಕಿತ್ಸೆಗಾಗಿ ಗ್ವಾಲಿಯರ್ಗೆ ಕರೆದೊಯ್ಯಲು ಸಲಹೆ ನೀಡಿದರು. ಸದ್ಯ ಆತನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.