ಜಲಾಶಯಕ್ಕೆ ಕೈ ಜಾರಿ ಬಿತ್ತು ಲಕ್ಷ ರೂಪಾಯಿ ಬೆಲೆಯ ಮೊಬೈಲ್ – ಜಲಾಶಯದ 41 ಲಕ್ಷ ಲೀಟರ್ ನೀರನ್ನು ಹೊರತೆಗೆಸಿದ ಅಧಿಕಾರಿ ಸಸ್ಪೆಂಡ್, ಏನಿದು ಘಟನೆ?

ಜಲಾಶಯಕ್ಕೆ ಕೈ ಜಾರಿ ಬಿತ್ತು ಲಕ್ಷ ರೂಪಾಯಿ ಬೆಲೆಯ ಮೊಬೈಲ್ – ಜಲಾಶಯದ 41 ಲಕ್ಷ ಲೀಟರ್ ನೀರನ್ನು ಹೊರತೆಗೆಸಿದ ಅಧಿಕಾರಿ ಸಸ್ಪೆಂಡ್, ಏನಿದು ಘಟನೆ?

ನ್ಯೂಸ್ ಆ್ಯರೋ : ಸರಕಾರಿ ಅಧಿಕಾರಿಯೊಬ್ಬ ಜಲಾಶಯದಲ್ಲಿ ಬಿದ್ದಿದ್ದ ತನ್ನ ದುಬಾರಿ ಮೊಬೈಲ್ ಫೋನ್ ಅನ್ನು ಮರುಪಡೆಯುವುದಕ್ಕಾಗಿ ಜಲಾಶಯದಿಂದ ಬರೋಬ್ಬರಿ 41 ಲಕ್ಷ ಲೀಟರ್ ನೀರನ್ನು ಪಂಪ್ ಮಾಡುವ ಮೂಲಕ ಖಾಲಿ ಮಾಡಿರುವ ಘಟನೆ‌ ಛತ್ತೀಸ್ಗಢದಲ್ಲಿ ನಡೆದಿದೆ.

ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್‌ನ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು ಖೇರ್ಕಟ್ಟಾ ಅಣೆಕಟ್ಟಿನಲ್ಲಿ ಕುಳಿತು ರಜೆಯನ್ನು ಆನಂದಿಸುತ್ತಿದ್ದಾಗ ಆಕಸ್ಮಿಕವಾಗಿ 1 ಲಕ್ಷ ರೂ. ಮೌಲ್ಯದ ಸ್ಮಾರ್ಟ್‌ಫೋನ್ 15 ಅಡಿ ಆಳದ ನೀರಿನಿಂದ ತುಂಬಿರುವ ಪ್ರದೇಶದಲ್ಲಿ ಬಿದ್ದಿದೆ. ನಂತರ ಸ್ಥಳೀಯರು ಧುಮುಕಿದರೂ ಮೊಬೈಲ್ ಪತ್ತೆಯಾಗಿಲ್ಲ. ಆದ್ದರಿಂದ ಅಧಿಕಾರಿಯು ಮೂರು ದಿನಗಳ ಕಾಲ ನಿರಂತರವಾಗಿ ಎರಡು 30hp ಡೀಸೆಲ್ ಪಂಪ್‌ಗಳನ್ನು ಬಳಸಿ 41 ಲಕ್ಷ ಲೀಟರ್ ನೀರನ್ನು ಖಾಲಿ ಮಾಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಮೂರು ದಿನಗಳ ಕಾಲ ಅಂದರೆ ಸೋಮವಾರ ಸಂಜೆಯಿಂದ ಗುರುವಾರದವರೆಗೆ ಪಂಪ್ ಬಳಸಿ ನೀರು ಹೊರ ತೆಗೆಯಲಾಗಿದೆ. ಅಂತಿಮವಾಗಿ ದೂರಿನ ಮೇರೆಗೆ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಡೆದಿದ್ದಾರೆ. ಆದರೆ, ಅದಾಗಲೇ ಆರು ಅಡಿ ಆಳದವರೆಗೆ ಅಂದರೆ ಸುಮಾರು 21 ಲಕ್ಷ ಲೀಟರ್ ನೀರನ್ನು ಅದಾಗಲೇ ಪಂಪ್ ಮಾಡಲಾಗಿತ್ತು. ಘಟನೆಯ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜೇಶ್ ‘ನೀರು ಬಳಕೆಗೆ ಯೋಗ್ಯವಾಗಿಲ್ಲ. ಜೊತೆಗೆ ಸ್ಥಳೀಯ ಉಪವಿಭಾಗಾಧಿಕಾರಿಯಿಂದ ಪೂರ್ವ ಮೌಖಿಕ ಅನುಮತಿಯನ್ನು ಪಡೆದಿದ್ದೆ’ ಎಂದು ತಿಳಿಸಿದ್ದಾರೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *