ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ ಸುರಿಸಿದ ವ್ಯಕ್ತಿ ಖಾಕಿ ಬಲೆಗೆ – ನೋಟಿಸ್ಗೆ ಉತ್ತರಿಸದಿದ್ದಕ್ಕೆ ವಶಕ್ಕೆ ಪಡೆದ ಪೊಲೀಸರು
- ವೈರಲ್ ನ್ಯೂಸ್
- January 25, 2023
- No Comment
- 117
ನ್ಯೂಸ್ ಆ್ಯರೋ : ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಕೆಆರ್ ಮಾರುಕಟ್ಟೆ ಫ್ಲೈಒವರ್ನಿಂದ ಹಣ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಿಸುತ್ತಿದ್ದಾರೆ.
ನೋಟು ಎಸೆದ ವ್ಯಕ್ತಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಆತ ಇವೆಂಟ್ ಮ್ಯಾನೇಜರ್ ಎಂದು ತಿಳಿದು ಬಂದಿದೆ.
ಮಂಗಳವಾರ ಈತ ಫ್ಲೈ ಓವರ್ನಿಂದ ಹತ್ತು ರೂಪಾಯಿ ನೋಟುಗಳನ್ನು ಎಸೆದಿದ್ದನು. ಇದರಿಂದ ಜನರು ಆಶ್ಚರ್ಯಚಕಿತರಾದರೆ ಮತ್ತೆ ಕೆಲವರು ಹಣವನ್ನು ಆಯ್ದುಕೊಳ್ಳಲು ಮುಂದಾಗಿದ್ದರು. ಸದ್ಯ ಈ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕೆಆರ್ ಮಾರುಕಟ್ಟೆಗೆ ಹೋಂಡಾ ಆಕ್ಟಿವಾ ಸ್ಕೂಟರ್ನಲ್ಲಿ ಬಂದಿದ್ದ ಸೂಟು ಧರಿಸಿದ್ದ ವ್ಯಕ್ತಿ ಚೀಲದಲ್ಲಿ ತುಂಬಿದ್ದ ಹಣವನ್ನು ಕೆಳಗೆ ಬೀಸಾಕಿದ್ದಾನೆ. ಅದಲ್ಲದೆ ಕುತ್ತಿಗೆಗೆ ಗಡಿಯಾರವನ್ನು ನೇತು ಹಾಕಿಕೊಂಡಿದ್ದ. ಹಣವನ್ನು ಬಿಸಾಕುತ್ತಿರುವ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಅದಲ್ಲದೆ ಈ ವಿಡಿಯೋ ಭಾರೀ ವೈರಲ್ ಆಗಿತ್ತು. ಈ ಘಟನೆಯಿಂದ ಕೆಲಕಾಲ ಕೆಆರ್ ಮಾರುಕಟ್ಟೆ ಬಳಿ ಕೆಲವು ಹೊತ್ತು ಟ್ರಾಫಿಕ್ ಜಾಂ ಕೂಡ ಆಗಿತ್ತು.
ಕಾರಣ ನೀಡುವಂತೆ ನೋಟಿಸ್:
ಈತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 92 ಡಿ, ಐಪಿಸಿ 283ರ ಅಡಿಯಲ್ಲಿ ಎನ್ಸಿಆರ್ ಪ್ರಕರಣ ದಾಖಲಿಸಿದ್ದ ಕೆಆರ್ ಮಾರುಕಟ್ಟೆ ಪೊಲೀಸರು ಕಾರಣ ನೀಡುವಂತೆ ನಾಗರಭಾವಿಯಲ್ಲಿರುವ ಅರುಣ್ ಮನೆಗೆ ನೋಟಿಸ್ ಜಾರಿ ಮಾಡಿದ್ದರು.
ನೋಟಿಸ್ಗೆ ಆತ ಉತ್ತರಿಸದಿದ್ದಾಗ ಕೊನೆಗೆ ಸಂಜೆ ವೇಳೆ ಆತ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಮಾಹಿತಿ ಗೊತ್ತಾಗಿ ಅದರಂತೆ ಕಚೇರಿಗೆ ಹೋಗಿದ್ದ ಪೊಲೀಸರು ಅರುಣ್ ಅನ್ನು ವಶಕ್ಕೆ ಪಡೆದಿದ್ದಾರೆ.