ಶಕ್ತಿಗಿಂತ ಯುಕ್ತಿ ಮೇಲು ಎನ್ನುವುದು ಇದೇ ಕಾರಣಕ್ಕೆ -‌ ಎರಡನೇ ಅಂತಸ್ತಿನಿಂದ ಟೇಬಲ್ ಇಳಿಸಿದ ವೀಡಿಯೋ ವೈರಲ್..!

ಶಕ್ತಿಗಿಂತ ಯುಕ್ತಿ ಮೇಲು ಎನ್ನುವುದು ಇದೇ ಕಾರಣಕ್ಕೆ -‌ ಎರಡನೇ ಅಂತಸ್ತಿನಿಂದ ಟೇಬಲ್ ಇಳಿಸಿದ ವೀಡಿಯೋ ವೈರಲ್..!

ನ್ಯೂಸ್ ಆ್ಯರೋ‌ : ಒಂದಷ್ಟು ಜನರ ಗುಂಪು ಎರಡನೇ ಅಂತಸ್ತಿನಿಂದ ಕೆಳಗೆ ಟೇಬಲ್ ಸಾಗಿಸುವ ದೃಶ್ಯವೊಂದು ಇಂಟರ್ ನೆಟ್ ನಲ್ಲಿ ಧೂಳೆಬ್ಬಿಸಿದೆ. ಅರೆ ಇದರಲ್ಲೇನು ವಿಶೇಷ ಇದೆ ಎಂದು ಕೇಳಬಹುದು. ಈ ಪೀಠೋಪಕರಣ ಸಾಗಿಸಲು ಬಳಸಿದ ತಂತ್ರವೇ ಸೃಜನಾತ್ಮಕವಾಗಿದೆ.

ವೀಡಿಯೋ ವೈರಲ್

ಮುಂಬಯಿಯಲ್ಲಿ ಕಂಡು ಬಂದ ಈ ದೃಶ್ಯ ಇದೀಗ ವೈರಲ್ ಆಗಿದೆ. aamchi_mumbai ಎನ್ನುವ ಇಸ್ಟಾಗ್ರಾಮ್ ಖಾತೆಯಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ. ಅಷ್ಟಕ್ಕೂ ಈ ವೀಡಿಯೋದಲ್ಲೇನಿದೆ ಎನ್ನುವ ಕುತೂಹಲ ನಿಮ್ಮಲ್ಲಿ ಮೂಡಿರಬಹುದು. ಅದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಭಾರದ ಟೇಬಲ್ ಗಳನ್ನು ಎರಡನೇ ಮಹಡಿಯಿಂದ ಕೆಳಕ್ಕೆ ತರಲು 3-4 ಜನ ಕಷ್ಟಪಡಬೇಕು. ಆದರೆ ಇವರು ಬುದ್ದಿ ಉಪಯೋಗಿಸಿ ಅದಕ್ಕೆ ಸುಲಭ ಮಾರ್ಗ ಕಂಡುಕೊಂಡಿದ್ದಾರೆ. ಹಗ್ಗ ಉಪಯೋಗಿಸಿ ಟೇಬಲ್ ಅನ್ನು ಎರಡನೇ ಅಂತಸ್ತಿನಿಂದ ಕೆಳಗೆ ಇಳಿಸಿದ್ದಾರೆ. ಮೇಲಿನಿಂದ ಕೆಲವರು ಹಗ್ಗದ ಮೇಲೆ ಟೇಬಲ್ ಇಟ್ಟು ಎಚ್ಚರಿಕೆಯಿಂದ ಜಾರಿಸಿದ್ದಾರೆ. ಇತ್ತ ಕೆಳಗೆ ನಿಂತವರೂ ಅಷ್ಟೇ ಜಾಗರೂಕತೆಯಿಂದ ಟೇಬಲ್ ಇಳಿಸಿ ಪ್ರಯಾಸಕರ ಕೆಲಸವನ್ನು ಸುಲಭವಾಗಿ ಮುಗಿಸಿ ಬಿಟ್ಟಿದ್ದಾರೆ.

ಮುಂಬಯಿಯ ಸಾಮಾನ್ಯ ರವಿವಾರ ಎನ್ನುವ ಕ್ಯಾಪ್ಶನ್ ನೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವೀಡಿಯೋವನ್ನು ಅನೇಕರು ವೀಕ್ಷಿಸಿದ್ದಾರೆ. ಹಾರ್ಡ್ ವರ್ಕ್ ಗಿಂತ ಸ್ಮಾರ್ಟ್ ವರ್ಕ್ ಉತ್ತಮ ಎಂದು ಕೆಲವರು ಹೇಳಿದ್ದಾರೆ. ಇವರ ಸಂಪರ್ಕ ಸಂಖ್ಯೆ ಇದ್ದರೆ ಕೊಡಿ ಎಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ. ಪರ್ಫೆಕ್ಟ್ ಲ್ಯಾಂಡಿಂಗ್ ಎಂದು ಮತ್ತೊಬ್ಬರು ಉದ್ಘರಿಸಿದ್ದಾರೆ. ಜೊತೆಗೆ ಅನೇಕರು ಇವರ ಐಡಿಯಾಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *