ಮಗು ಪಡೆಯಲು ಪತಿಯನ್ನು ಪೆರೋಲ್ ಮೇಲೆ ಮನೆಗೆ ಕಳಿಸಿ – ಜೈಲು ಅಧಿಕಾರಿಗಳಿಗೆ ಪತ್ರ ಬರೆದ ಖೈದಿಯ ಪತ್ನಿ, ಮನವಿ ಪತ್ರ ವೈರಲ್…!!

ಮಗು ಪಡೆಯಲು ಪತಿಯನ್ನು ಪೆರೋಲ್ ಮೇಲೆ ಮನೆಗೆ ಕಳಿಸಿ – ಜೈಲು ಅಧಿಕಾರಿಗಳಿಗೆ ಪತ್ರ ಬರೆದ ಖೈದಿಯ ಪತ್ನಿ, ಮನವಿ ಪತ್ರ ವೈರಲ್…!!

ನ್ಯೂಸ್ ಆ್ಯರೋ‌ : ಜೈಲಿನಲ್ಲಿರುವ ಗಂಡನಿಗೋಸ್ಕರ ಮಹಿಳೆಯೊಬ್ಬಳು ಜೈಲು ಅಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾಳೆ. ಗಂಡನನ್ನು ಪೆರೋಲ್ ಮೇಲೆ ಕಳುಹಿಸಿಕೊಡಬೇಕು ಎಂದಿರುವ ಆಕೆ ಅದಕ್ಕೆ ಕಾರಣವನ್ನು ನೀಡಿದ್ದಾಳೆ. ಸದ್ಯ ಆ ಪತ್ರವೀಗ ಭಾರೀ ವೈರಲ್ ಆಗಿದೆ. ಅಷ್ಟಕ್ಕೂ ಆ ಪತ್ರದಲ್ಲೇನಿದೆ ಎನ್ನುವ ಮಾಹಿತಿ ಇಲ್ಲಿದೆ.

ಮಧ್ಯಪ್ರದೇಶದ ಶಿವಪುರ ಮೂಲದ ಮಹಿಳೆ ತನ್ನ ಗಂಡನ ಪರವಾಗಿ ಜೈಲು ಅಧಿಕಾರಿಗಳಿಗೆ ಪತ್ರ ಈಗ ಸದ್ದು ಮಾಡುತ್ತಿದೆ. ಮದುವೆಯಾದ ಸಂದರ್ಭದಲ್ಲಿ ಗಂಡ ಜೈಲು ಸೇರಿದ್ದರಿಂದ ನನಗೆ ಗರ್ಭ ಧರಿಸಲು ಸಾಧ್ಯವಾಗಿಲ್ಲ. ಆದರೀಗ ನನಗೆ ಆ ಬಯಕೆ ಉಂಟಾಗಿದೆ. ಮಗುವನ್ನು ಪಡೆಯಬೇಕೆನಿಸುತ್ತಿದೆ. ಹೀಗಾಗಿ ನನ್ನ ಗಂಡನನ್ನು ಪೆರೋಲ್ ಮೇಲೆ ಕಳುಹಿಸಿಕೊಡಬೇಕು ಎಂದು ಆಕೆ ಪತ್ರದಲ್ಲಿ ಕೇಳಿಕೊಂಡಿದ್ದಾಳೆ.

ದಾರಾ ಸಿಂಗ್ ಜಾವತ್ ಎಂಬಾತ ಮದುವೆಯಾದ ಸಂದರ್ಭದಲ್ಲಿ ಕೊಲೆ ಪ್ರಕರಣದ ಮೂಲಕ ಜೈಲು ಸೇರಿದ್ದು, ಏಳು ವರ್ಷಗಳಿಂದ ಗ್ವಾಲಿಯರ್ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಇದೀಗ ಈತನ ಪತ್ನಿ ಗಂಡನನ್ನು ಪೆರೋಲ್ ಮೂಲಕ ಜೈಲಿನಿಂದ ಕಳುಹಿಸಿಕೊಡಿ ಎಂದು ಅರ್ಜಿ ಸಲ್ಲಿಸಿದ್ದಾಳೆ.

ಜೊತೆಗೆ ದಾರಾ ಸಿಂಗ್ ತಂದೆ ಕರೀಂ ಸಿಂಗ್ ಜಾವತ್ ಕೂಡ ಪತ್ರದಲ್ಲಿ ಮನವಿ ಮಾಡಿದ್ದು ‘ಮಗನ ಬಂಧನದಿಂದ ನಮಗೆ ಮದುವೆಯ ಸಂತಸವನ್ನು ಸಂಭ್ರಮಿಸಲು ಸಾಧ್ಯವಾಗಿಲ್ಲ. ಇದೀಗ ನಮಗೆ ವಯಸ್ಸಾಗಿದೆ. ಪತ್ನಿ ಅನಾರೋಗ್ಯ ಪೀಡಿತಳಾಗಿದ್ದು, ಮೊಮ್ಮಗ ಬೇಕೆಂದು ಬಯಸಿದ್ದಾಳೆ. ಹೀಗಾಗಿ ಮಗನನ್ನು ಕೆಲ ದಿನಗಳ ಕಾಲ ಜೈಲಿನಿಂದು ಕಳುಹಿಸಿಕೊಡುವಂತೆ’ ಹೇಳಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗ್ವಾಲಿಯರ್ ಸೆಂಟ್ರಲ್ ಜೈಲ್ ಸೂಪರಿಂಟೆಂಡೆಂಟ್ ವಿದಿತ್ ಸಿರ್ವಯ್ಯ, “ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿ ಶಿಕ್ಷೆ ಎರಡು ವರ್ಷ ಪೂರ್ಣಗೊಂಡ ಬಳಿಕ ನಡವಳಿಕೆಯು ಆಧಾರದ ಮೇಲೆ ಪೆರೋಲ್‌ ಪಡೆಯಲು ಅರ್ಹರಾಗಿರುತ್ತಾರೆ. ಪೆರೋಲ್ ನೀಡುವುದು ಅಥವಾ ನೀಡದಿರುವ ಬಗ್ಗೆ ಜಿಲ್ಲಾಧಿಕಾರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ಹೇಳಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *