ಹಾಡಹಗಲೇ ವಿದ್ಯಾರ್ಥಿನಿಗೆ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ – ವಿಡಿಯೋ ವೈರಲ್, ಆರೋಪಿ ಉಪನ್ಯಾಸಕನ ಬಂಧನ

ಹಾಡಹಗಲೇ ವಿದ್ಯಾರ್ಥಿನಿಗೆ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ – ವಿಡಿಯೋ ವೈರಲ್, ಆರೋಪಿ ಉಪನ್ಯಾಸಕನ ಬಂಧನ

ನ್ಯೂಸ್ ಆ್ಯರೋ : ಕಾಲೇಜೊಂದರಲ್ಲಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ದೂರು ದಾಖಲಾದ 24 ಗಂಟೆಗಳ ಒಳಗೆ ಆರೋಪಿ ಉಪನ್ಯಾಸಕನನ್ನು ಪೋಲಿಸರು ಬಂಧಿಸಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರದಿಂದ ವರದಿಯಾಗಿದೆ.

ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನ ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಪೋಸ್ಟ್ ಹಂಚಿಕೊಂಡಿರುವ ಡಾ. ಅರುಣೇಶ್ ಕುಮಾರ್ ಯಾದವ್ ಅವರು ತಮ್ಮನ್ನು ಭೌತಶಾಸ್ತ್ರದ ಪ್ರಾಧ್ಯಾಪಕ, ಸಾಮಾಜಿಕ ಕಾರ್ಯಕರ್ತ ಮತ್ತು ಕಿಸಾನ್ ನಾಯಕ ಎಂದು ಹೇಳಿಕೊಂಡಿದ್ದಾರೆ.

ವಿಡಿಯೋ ವೈರಲ್ ಆಗುತ್ತಲೇ ಉತ್ತರ ಪ್ರದೇಶದ ಪೊಲೀಸರು ಆರೋಪಿತ ಶಿಕ್ಷಕನನ್ನ ಬಂಧಿಸಿದ್ದಾರೆ. ಬಂಧಿತ ಶಿಕ್ಷಕನ ವಿಡಿಯೋ ಹಂಚಿಕೊಂಡಿರುವ ಪೊಲೀಸರು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನ ಹೆಸರು ವಿಜಯ್ ಸಿಂಗ್.

ಆರೋಪಿ ಕತ್ರಾದ ಐಟಿಐ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದಾನೆ. ದೂರು ಸ್ವೀಕರಿಸಿದ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಿರ್ಜಾಪುರದ ಎಸ್ಪಿ ಸಂತೋಷ್ ಮಿಶ್ರಾ ಹೇಳಿದ್ದಾರೆ. ಹೋಳಿ ಹಬ್ಬ ಆಚರಣೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *