Viral Video : ಸಬ್ ಇನ್ಸ್‌ಪೆಕ್ಟರ್ ಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಗೂಸಾ – ವಿಡಿಯೋ ವೈರಲ್, ಐವರು ಆರೋಪಿಗಳ ಬಂಧನ

Viral Video : ಸಬ್ ಇನ್ಸ್‌ಪೆಕ್ಟರ್ ಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಗೂಸಾ – ವಿಡಿಯೋ ವೈರಲ್, ಐವರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಪ್ರತಿಭಟನಾನಿರತ ಗುಂಪೊಂದು ಸಬ್‌ ಇನ್ಸ್ ಪೆಕ್ಟರ್‌ ಒಬ್ಬರನ್ನು ರಸ್ತೆಯಲ್ಲೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಸೋಮವಾರ(ಅ.31 ರಂದು) ನಡೆದಿದೆ.

ಉತ್ತರಪ್ರದೇಶ ಪೊಲೀಸ್‌ನ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ರಾಮ್ ಅವತಾರ್ ಅವರಿಗೆ ಗುಂಪೊಂದು ಥಳಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹೋಬಾದ ಪನ್ವಾರಿ ಪ್ರದೇಶದಲ್ಲಿ 13 ವರ್ಷದ ಬಾಲಕ ಬಸ್ಸಿನಡಿ ಸಿಲುಕಿ ಸಾವನ್ನಪ್ಪಿದ್ದ. ಇದಕ್ಕೆ ಸಂಬಂಧಿಸಿ ಮೃತನ ಬಾಲಕನ ಸಂಬಂಧಿಗಳು ಹಾಗೂ ಕೆಲ ಸ್ಥಳೀಯರು ರಸ್ತೆಯಲ್ಲಿ ನಿಂತು ಚಾಲಕನ ವಿರುದ್ಧ ಕ್ರಮಕ್ಕೆ ಹಾಗೂ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಯ ಕಾರಣದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಟ್ರಾಫಿಕ್‌ ಕ್ಲಿಯರ್‌ ಮಾಡಲು ಸ್ಥಳಕ್ಕೆ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ತನ್ನ ತಂಡದೊಂದಿಗೆ ಆಗಮಿಸಿದ್ದರು. ಈ ವೇಳೆ ಎಸ್‌ ಐ ಹಾಗೂ ಮೃತ ಬಾಲಕನ ಸಂಬಂಧಿಕರ ನಡುವ ಮಾತಿನ ಚಕಮಕಿ ಉಂಟಾಗಿದ್ದು, ಮೊದಲೇ ಸಿಟ್ಟಲಿದ್ದ ಜನ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ಅವರ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದಾರೆ.

ರಾಮ್‌ ಅವತಾರ್‌ ಅವರಿಗೆ ಮೊದಲು ಕಪಾಳ ಮೋಕ್ಷ ಮಾಡಿದ್ದು, ಬಳಿಕ ಒದ್ದು, ಕೋಲುಗಳಿಂದ ಹಲ್ಲೆ ಮಾಡಿದ್ದಾರೆ.
ಘಟನಾ ಸ್ಥಳದಲ್ಲಿದ್ದ ಇತರ ಮೂವರು ಪೊಲೀಸರು ಅಲ್ಲಿಂದ ಓಡಿಹೋಗಿದ್ದಾರೆ. ಇದಾದ ಬಳಿಕ ಘಟನಾ ಸ್ಥಳಕ್ಕೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಮತ್ತು ಪ್ರದೇಶದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಸ್ಥಳಕ್ಕೆ ಆಗಮಿಸಿ ಗುಂಪನ್ನು ಶಾಂತಗೊಳಿಸಿದ್ದು ನಂತರ ರಾಮ್ ಅವತಾರ್ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *