ಒಬ್ಬರನ್ನೊಬ್ಬರು ಬಿಟ್ಟಿರಲಾಗದೆ ಒಬ್ಬನನ್ನೇ ಮದುವೆಯಾದ ಅವಳಿ ಸಹೋದರಿಯರು

ಒಬ್ಬರನ್ನೊಬ್ಬರು ಬಿಟ್ಟಿರಲಾಗದೆ ಒಬ್ಬನನ್ನೇ ಮದುವೆಯಾದ ಅವಳಿ ಸಹೋದರಿಯರು

ನ್ಯೂಸ್ ಆ್ಯರೋ : ಒಬ್ಬರನ್ನೊಬ್ಬರು ಬಿಟ್ಟಿರಲಾಗದ ಅವಳಿ ಸಹೋದರಿಯರಿಬ್ಬರು ಒಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಸುದ್ದಿಯಾಗಿದ್ದಾರೆ.

ಮಹಾರಾಷ್ಟ್ರದ ಸೋಲಾಪುರದ ವ್ಯಕ್ತಿ ಅತುಲ್ ಎಂಬಾತನನ್ನು ಪಿಂಕಿ ಮತ್ತು ರಿಂಕಿ ಎನ್ನುವ ಅವಳಿ ಸಹೋದರಿಯರು ಶುಕ್ರವಾರ ಮದುವೆಯಾಗಿದ್ದು, ಈ‌ ಸುದ್ದಿ ಭಾರೀ ವೈರಲ್ ಆಗಿದೆ.

ಇದು ಕುಟುಂಬದ ಒಮ್ಮತದೊಂದಿಗೆ ನಡೆದ ಮದುವೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಜನರು ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯ ಬಗ್ಗೆ ಊಹಾಪೋಹ ಮಾಡುತ್ತಿದ್ದಾರೆ. ಅದಲ್ಲದೆ ಭಾರೀ ಚರ್ಚೆಗೂ ಕಾರಣವಾಗಿದೆ.

ಸಹೋದರಿಯರಿಬ್ಬರು ಬಿಟ್ಟಿರಲಾಗದೇ ಈ ನಿರ್ಧಾರ:

ಮುಂಬೈನ ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ನೋಡಲು ಒಂದೇ ರೀತಿ ಇದ್ದಾರೆ. ಅಲ್ಲದೇ ಇವರಿಬ್ಬರು ಐಟಿ ಎಂಜಿನಿಯರ್‌ಗಳು. ಬಾಲ್ಯದಿಂದಲೂ ಒಂದೇ ಮನೆಯಲ್ಲಿಇದ್ದು, ಒಬ್ಬರನ್ನೊಬ್ಬರು ಬಿಟ್ಟು ದೂರ ಹೋಗಿ ಬದುಕಿದ್ದೇ ಇಲ್ಲ. ತುಂಬಾ ಹಚ್ಚಿಕೊಂಡಿದ್ದರಿಂದ ಒಬ್ಬನನ್ನೇ ಮದುವೆಯಾಗಲು ನಿರ್ಧರಿಸಿದ್ದಾರೆ. ಅಂತೆಯೇ ಅತುಲ್‍ನನ್ನು ಮದುವೆ ಆಗಲು ಒಪ್ಪಿಗೆ ನೀಡಿದ್ದಾರೆ.

ಮನೆಯವರ ಒಪ್ಪಿಗೆ ಮೇರೆಗೆ ಮದುವೆ:

ಈ ಸಹೋದರಿಯರ ನಿರ್ಧಾರಕ್ಕೆ ಇಬ್ಬರ ಕುಟುಂಬದಿಂದಲೂ ಒಪ್ಪಿಗೆ ಸಿಕ್ಕಿದೆ. ಅದರ ಅನುಸಾರ ಶುಕ್ರವಾರ ಇವರ ಮದುವೆ ಮುಂಬೈ ನಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ:

ಅವಳಿ ಸಹೋದರಿಯರು ಒಬ್ಬನನ್ನೇ ಮದುವೆಯಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಹಾಗೇ ಇದು ಕಾನೂನು ಬದ್ಧವಾಗಿ ಸರಿಯೇ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಇಬ್ಬರ ಮನೆಯವರಿಗೆ ಬುದ್ಧಿ ಇಲ್ವಾ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *